ಧಾರವಾಡ | ಗ್ರಾಹಕಿಗೆ ಠೇವಣಿ ಹಣ ಹಿಂದಿರುಗಿಸದ ಸೊಸೈಟಿಗೆ ದಂಡ

Date:

Advertisements

ಗ್ರಾಹಕರೊಬ್ಬರು ಠೇವಣಿ ಇರಿಸಿದ್ದ ಹಣವನ್ನು, ಅವಧಿ ಮುಗಿದರೂ ಹಿಂದಿರುಗಿಸದೆ ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸಿದ್ದ ಧಾರವಾಡದ ವಿಕಾಸ್ ಅರ್ಬನ್ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸೊಸೈಟಿಗೆ ಗ್ರಾಹಕ ಆಯೋಗ ದಂಡ ವಿಶಿದಿದೆ. ಠೇವಣಿ ಹಣ ಮತ್ತು ಅದಕ್ಕೆ 13.5% ಬಡ್ಡಿ ಸೇರಿಸಿ ಕೊಡುವಂತೆ ಆದೇಶಿಸಿದೆ.

ಧಾರವಾಡದ ಕಮಲಾಪುರ ನಿವಾಸಿ ಅನ್ನಪೂರ್ಣಾಹುಲ್ಲಮನಿ ಎಂಬವರು ಸೊಸೈಟಿಯಲ್ಲಿ 2020ರಲ್ಲಿ 1.5 ಲಕ್ಷ ರೂ. ಮತ್ತು 2021ರಲ್ಲಿ 1 ಲಕ್ಷ ರೂ. ಹಣವನ್ನು ಒಂದು ವರ್ಷದ ಅವಧಿಗೆ ಠೇವಣಿ ಇಟ್ಟಿದ್ದರು. ಎರಡೂ ಠೇವಣಿಗಳ ಅವಧಿ ಮುಗಿದ ಬಳಿಕ, ಹಣ ಮತ್ತು ಬಡ್ಡಿಯ ಕೊತ್ತವನ್ನು ನೀಡುವಂತೆ ಸೊಸೈಟಿಗೆ ಕೇಳಿದ್ದರು. ಆದರೆ, ಸೊಸೈಟಿ ಹಣ ನೀಡಿರಲಿಲ್ಲ. ಹೀಗಾಗಿ, ಅನ್ನಪೂರ್ಣ ಅವರು ಸೊಸೈಟಿ ವಿರುದಧ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದರು.

ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯೆ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಅವರು ಪ್ರಕರಣದ ವಿಚಾರಣೆ ನಡೆಸಿದ್ದು, ಸೊಸೈಟಿಗೆ ದಂಡ ವಿಧಿಸಿದ್ದಾರೆ. “ಕರಾರಿನಂತೆ ಬಡ್ಡಿ ಸಮೇತ ಠೇವಣಿ ಹಣವನ್ನು ಹಿಂದಿರುಗಿಸುವುದು ಸೊಸೈಟಿ ಕರ್ತವ್ಯ. ಆದರೆ, ಅವಧಿ ಮುಗಿದು ಎರಡು ವರ್ಷಗಳೇ ಕಳೆದಿದ್ದರೂ ಹಣ ನೀಡದೇ ಇರುವುದು ಅಕ್ಷಮ್ಯವಾಗಿದೆ” ಎಂದು ಹೇಳಿದ್ದಾರೆ.

Advertisements

“ಸೊಸೈಟಿಯು ಎರಡೂ ಠೇವಣಿಗಳ ಒಟ್ಟು 2.5 ಲಕ್ಷ ರೂ. ಮತ್ತು ಠೇವಣಿ ಇಟ್ಟಾಗಿನಿಂದ ಇಂದಿನವರೆಗೆ 13.5% ಬಡ್ಡಿದರದಲ್ಲಿ ಬಡ್ಡಿಯನ್ನೂ ದೂರುದಾರ ಗ್ರಾಹಕಿಗೆ ನೀಡಬೇಕು. ಅಲ್ಲದೆ, ಆಕೆಯ ಅನುಭವಿಸಿರುವ ಮಾನಸಿಕ ಹಿಂಸೆಗೆ ಪರಿಹಾರವಾಗಿ 25,000 ರೂ. ಹಾಗೂ ಪ್ರಕರಣದ ವೆಚ್ಚಕ್ಕಾಗಿ 10,000 ರೂ. ನೀಡಬೇಕು” ಎಂದು ಆದೇಶ ಹೊರಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X