ಬೆಂಗಳೂರು | ಮಾರತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಭಾರೀ ವಾಹನಗಳಿಗೆ ಸಂಚಾರ ನಿರ್ಬಂಧ

Date:

Advertisements

ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎಚ್​ಎಎಲ್​ ಸಂಚಾರ ಪೊಲೀಸರು ಸರ್ವಿಸ್​ ರಸ್ತೆಯಲ್ಲಿ ಭಾರೀ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್​ಗಳ ಸಂಚಾರವನ್ನು ನಿಷೇಧಿಸಿದ್ದಾರೆ.

ಬೆಂಗಳೂರು ನಗರ ಎಚ್.ಎ.ಎಲ್ ಏ‌ರ್‌ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ವರ್ತೂರು ರಸ್ತೆ ಮತ್ತು ಹೊರವರ್ತುಲ ರಸ್ತೆಯಲ್ಲಿರುವ ಮಾರತಹಳ್ಳಿ ಬ್ರಿಡ್ಜ್ ಮೇಲೆ ಸಾರ್ವಜನಿಕರ ವಾಹನಗಳ ಸುಗಮ ಸಂಚಾರ ಮಾಡುವ ನಿಟ್ಟಿನಲ್ಲಿ ಮಾರತಹಳ್ಳಿ ಹೊರವರ್ತುಲ ರಸ್ತೆಯ ಕೆ.ಎಲ್.ಎಮ್ ಮಾಲ್ ಸರ್ವೀಸ್ ರಸ್ತೆಯಲ್ಲಿ ಎಲ್.ಜಿ.ವಿ, ಹೆಚ್.ಜಿ.ವಿ, ಹೆಚ್.ಟಿ.ವಿ ಮತ್ತು ಬಸ್‌ಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸದರಿ ವಾಹನಗಳು ಕಾರ್ತಿಕ್‌ ನಗರ-ಇಸ್ರೋ ಜಂಕ್ಷನ್‌ನಲ್ಲಿ ತಿರುವು ಪಡೆದು ಐ.ಟಿ.ಪಿ.ಎಲ್, ಕಾಡುಗೋಡಿ, ವರ್ತೂರು ಕೋಡಿ ಕಡೆಗೆ ಚಲಿಸಬಹುದಾಗಿದೆ. ಹಾಗೇಯೇ, ಬೆಂಗಳೂರು ನಗರದೊಳಗೆ ಚಲಿಸಲು ಇಸ್ರೋ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ದೊಡ್ಡನಕ್ಕುಂದಿ ಗ್ರಾಮದ ರಸ್ತೆಯ ಮೂಲಕ ಹಳೆ ಏರ್‌ಪೋರ್ಟ್ ರಸ್ತೆ ಮೂಲಕ ಚಲಿಸಬಹುದಾಗಿದೆ.

Advertisements

ಲಘು ವಾಹನ ಮತ್ತು ಶಾಲಾ ವಾಹನಗಳು ಮಾತ್ರ ಕೆ.ಎಲ್.ಎಮ್ ಮಾಲ್ ಸರ್ವೀಸ್ ರಸ್ತೆ ಮೂಲಕ ಮಾರತಹಳ್ಳಿ ಬ್ರಿಡ್ ಮೂಲಕ ಕುಂದಲಹಳ್ಳಿ ಗೇಟ್ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸಲು ಅನುವು ಮಾಡಿಕೊಟ್ಟಿದೆ.

ಈ ಸುದ್ದಿ ಓದಿದ್ದೀರಾ? ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ ಭಾಗ್ಯ’

ಸಾರ್ವಜನಿಕರ ವಾಹನಗಳ ಸುಗಮ ಸಂಚಾರದ ಉದ್ದೇಶದಿಂದ ತಾತ್ಕಾಲಿಕ ಸಂಚಾರ ಮಾರ್ಪಾಟು ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X