ಪ್ರೀತಿಸಿದ ಯುವತಿಗೆ ಮತ್ತೊಬ್ಬನೊಂದಿಗೆ ವಿವಾಹೇತರ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

Date:

Advertisements

ಪ್ರೀತಿಸಿದ ಹುಡುಗಿಗೆ ಅಕ್ರಮ ಸಂಬಂಧ ಇರುವದನ್ನು ಕಣ್ಣಾರೆ ಕಂಡ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ. ಅಲ್ಲದೇ, ಮಗನ ಆತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಮೃತ ಯುವಕನ ಪೋಷಕರು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅನ್ಬರಾಸನ್ ಮೃತ ಯುವಕ. ದಿವ್ಯಾ ಆರೋಪಿ.

ಆರೋಪಿ ದಿವ್ಯಾ ಬೆಂಗಳೂರಿನ ಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತ ಅನ್ಬರಾಸನ್ ಫ್ಲಿಪ್ ಕಾರ್ಟ್​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.

Advertisements

ದಿವ್ಯಾಗೆ ಈ ಹಿಂದೆ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಬಳಿಕ, ಸ್ವಲ್ಪ ದಿನಗಳ ಅಂತರದಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದರು. ಚಿಕ್ಕನಾಗಮಂಗಲದಲ್ಲಿ ಬಾಡಿಗೆ ಮನೆ ಮಾಡಿ ಗಂಡ ಹೆಂಡತಿ ಎಂದು ಹೇಳಿ ಕಳೆದ ಆರು ತಿಂಗಳಿನಿಂದ ವಿವಾಹೇತರ ಸಹಜೀವನದಲ್ಲಿದ್ದರು.

ಅನ್ಬರಾಸನ್ ಜತೆಗೆ ಪ್ರೀತಿಯಲ್ಲಿರುವಾಗಲೇ ಸಂತೋಷ್ ಎಂಬ ಯುವಕನ ಜತೆಗೆ ವಿದ್ಯಾ ಪ್ರೀತಿಯಲ್ಲಿ ಬಿದ್ದಿದ್ದಳು. ತಮ್ಮ ಮನೆಯಲ್ಲಿ ಸಂತೋಷ್ ಮತ್ತು ವಿದ್ಯಾ ಜೊತೆಯಲ್ಲಿರುವುದನ್ನು ಕಂಡ ಅನ್ಬರಾಸನ್ ಆಕೆಗೆ ತಿಳುವಳಿಕೆ ಹೇಳಿದ್ದನು ಎನ್ನಲಾಗಿದೆ.

ಆದರೂ ಕೇಳದ ವಿದ್ಯಾ ಸಂತೋಷ್ ಎಂಬಾತನೊಂದಿಗೆ ಪ್ರೀತಿ ಮುಂದುವರೆಸಿದ್ದಳು. ಇದರಿಂದ ಮನನೊಂದ ಅನ್ಬರಾಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು: ನಿವಾಸಿಗಳು ಆಕ್ರೋಶ

ಸದ್ಯ ವಿದ್ಯಾ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಎಂದು ಪೋಷಕರು ದೂರು ನೀಡಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸಂತೋಷ್ ಹಾಗೂ ವಿದ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ನೇಹಿತನ ಜೊತೆ ಅನ್ಬರಸನ್ ಹಾಗೂ ವಿದ್ಯಾ ಮಾತನಾಡಿರುವ ಕಾಲ್ ರೇಕಾರ್ಡ್ ಸದ್ಯ ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X