ಕಮೀಷನ್ ಆರೋಪ | ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚಲಿದೆ: ವಿಜಯೇಂದ್ರ

Date:

Advertisements

ಸಾಕ್ಷಿ ಸಮೇತ ಡಿ ಕೆಂಪಣ್ಣ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡುತ್ತಿದ್ದಾರೆ. ಆದರೆ, ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ.
ಬಿಜೆಪಿ ಸರ್ಕಾರದ ಕಾಲದಲ್ಲಿ ಇದೇ ಕೆಂಪಣ್ಣನವರು ಕಮೀಷನ್ ಆರೋಪದ ಗದ್ದಲ ಎಬ್ಬಿಸಿದ್ದರು. ಕಾಂಗ್ರೆಸ್ಸಿಗರು ಅದನ್ನು ಬಂಡವಾಳ ಮಾಡಿಕೊಂಡು ಸತ್ಯಹರಿಶ್ಚಂದ್ರರಂತೆ ಕೂಗಾಡಿದ್ದರು” ಎಂದಿದ್ದಾರೆ.

“ಸತ್ಯ ಏನೆಂಬುದು ಜನರಿಗೆ ಮನವರಿಕೆಯಾಗುತ್ತಿದೆ, ಮಾನ್ಯ ಕೆಂಪಣ್ಣನವರು ತಾವೇ ಹೇಳಿರುವಂತೆ
ಕಮೀಷನ್ ವಸೂಲಿಗೆ ನಿಯುಕ್ತಿಯಾಗಿರುವ ಅಧಿಕಾರಗಳ ವಿವರ ಧೈರ್ಯವಾಗಿ ಬಹಿರಂಗ ಪಡಿಸಲಿ ಆಗ ಅದರ ಹಿಂದಿರುವ ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚುತ್ತದೆ” ಎಂದು ಹೇಳಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿಜಯಣ್ಣ ಎಂಟು ತಿಂಗಳ ಹಿಂದೆ ತಮ್ಮದೇ ಸರ್ಕಾರದಲ್ಲಿ ನಲವತ್ತು ಪರ್ಸೆಂಟ್ ಕಮಿಷನ್,,ಪಾಪ ಪರ್ಸೆಂಟೇಜು ಏಟಿಗೆ ಕೆಲವರು ಜೀವ ಕಳಕೊಂಡರು,,, ಎಷ್ಟು ಬೇಗ ಮರೆತುಹೋಗಿದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X