ರಾಯಚೂರು | ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ

Date:

Advertisements

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ನೀಡಿರುವ ಯೋಜನೆಗಳು ಹಾಗೂ ಮಾಹಿತಿ ನೀಡಲು ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಸಲಾಗುತ್ತದೆ ಎಂದು ರಾಯಚೂರು ಜಿಲ್ಲಾಧ್ಯಕ್ಷ ಸಿದ್ದನಗೌಡ ನೆಲಹಾಳ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಜಿಲ್ಲೆಯ ಐದು ಗ್ರಾಮಗಳಲ್ಲಿ ಗ್ರಾಮ ಪರಿಕ್ರಮ ಯಾತ್ರೆ ನಡೆಯಲಿದೆ. ರೈತರು ಹಾಗೂ ಕೃಷಿಕ ಮನೆ ಮನೆಗೆ ತೆರಳಿ ಕೇಂದ್ರ ಯೋಜನೆ ಕರಪತ್ರ ಹಾಗೂ ಮಾಹಿತಿಯನ್ನು ಒದಗಿಸಲಾಗುತ್ತದೆ. ಕೇಂದ್ರ ಸರ್ಕಾರ ನೈಸರ್ಗಿಕ ಕೃಷಿಗೆ ಒತ್ತು ನೀಡಿ 23 ಬೆಳಗಳಿಗೆ ಕನಿಷ್ಠ ಬೆಂಬಲ ಬೆಲೆ, ರಾಷ್ಟ್ರೀಯ ಫಸಲ್ ಭೀಮಾ ಯೋಜನೆಗೆ ₹48 ಕೋಟಿ ನೀಡಿ ಒಂದು ಲಕ್ಷ ಕೋಟಿ ಮಂದಿ ರೈತರಿಗೆ ನೇರ ನಗದು ನೀಡಿದೆ” ಎಂದರು.

“ಕಿಸಾನ್ ಸಮ್ಮಾನ್ ಯೋಜನೆಯಡಿ 11.8 ಕೋಟಿ ರೈತರಿಗೆ 2.8 ಲಕ್ಷ ಕೋಟಿ ನೀಡಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 2021ರಿಂದ 2023ವರೆಗೆ ₹93,000 ಕೋಟಿ ಒದಗಿಸಲಾಗಿದೆ. ಕೃಷಿ ರಫ್ತು 4 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ. ರೈತರಿಗೆ 23 ಕೋಟಿಯಷ್ಟು ಮಣ್ಣಿನ ಆರೋಗ್ಯ ಕಾರ್ಡ್‌ ಹಾಗೂ ರಸಗೊಬ್ಬರಗಳ ಸಬ್ಸಿಡಿಯನ್ನು ಶೇ.500ರಷ್ಟು ಏರಿಸಲಾಗಿದೆ. ನೀರಿನ ಉಳಿತಾಯ, ಡಿಜಿಟಲ್ ಪಾವತಿ, ಸ್ವಚ್ವತಾ ಅಭಿಯಾನ, ಮೇಡ್ ಇನ್ ಇಂಡಿಯಾ ಸೇರಿದಂತೆ 9 ಸಂಕಲ್ಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ಒತ್ತು ನೀಡುತ್ತಿರುವ ಕುರಿತು ಜನರಿಗೆ ಮಾಹಿತಿ ನೀಡಲಾಗುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳ ಅಭಿವೃದ್ಧಿ ಅವಶ್ಯಕ: ಬಸವರಾಜ ಬೆಣ್ಣೆ

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನರೆಡ್ಡಿ, ಶಿವಲಿಂಗಯ್ಯ ಸ್ವಾಮಿ, ನೀಲಕಂಠಗೌಡ ಜಾಲಿಬೆಂಚಿ, ಮಲ್ಲಿಕಾರ್ಜುನ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X