‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

Date:

Advertisements

ಕಾಯಕ ಶರಣರು ಆಧ್ಯಾತ್ಮದ ಜತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲವೆಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ್ ನುಡಿದರು.

‌ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂ‌ಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಕಾಯಕ ಶರಣರಾದ ಶರಣ ಮಾದಾರ ಚೆನ್ನಯ್ಯ, ಶರಣ ಸಮಗಾರ ಹರಳಯ್ಯ, ಶರಣ ಡೋಹರ ಕಕ್ಕಯ್ಯನವರ ಜಯಂತಿಯ ಅಂಗವಾಗಿ ಶರಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಮಾತನಡಿದರು.

“ಶರಣರ ವಚನಗಳು ಸಂವಿಧಾನ ರಚನೆಯಲ್ಲಿ ಅಗಾಧವಾದ ಪರಿಣಾಮ ಬೀರಿವೆ. ಶರಣ ಮಾದಾರ ಚೆನ್ನಯ್ಯ, ಶರಣ ಸಮಗಾರ ಹರಳಯ್ಯ, ಶರಣ ಡೋಹರ ಕಕ್ಕಯ್ಯ ಅವರುಗಳು, ಬಡತನದಲ್ಲಿ ಮಾಡುವ ಕಾಯಕಗಳಲ್ಲಿ ಹಿರಿಮೆ ಇರುತ್ತದೆ ಎಂದು ಸ್ವಾಭಿಮಾನದಿಂದ ಬದುಕಿದಂತಹ ಮಹಾನುಭಾವರಾಗಿದ್ದಾರೆ” ಎಂದರು.

Advertisements

“ಶರಣರ ಜಯಂತಿಗಳು ಕೇವಲ ಅದೇ ಸಮುದಾಯಕ್ಕೆ ಸೀಮಿತವಾಗಿರುವುದು ದುರ್ದೈವದ ಸಂಗತಿಯಾಗಿದೆ. ಮುಂದಿನ ಜಯಂತಿಗಳಲ್ಲಿ ಸಮುದಾಯದ ಜನ ಸೇರಿದಂತೆ ಎಲ್ಲರೂ ಪಾಲ್ಗೊಳ್ಳುವ ಮೂಲಕ ಶರಣರ ಜಯಂತಿಗಳನ್ನು ಆಚರಿಸಬೇಕು. ವಿಶ್ವಗುರು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಅಣ್ಣ ಬಸವಣ್ಣ ಸೇರಿದಂತೆ ಎಲ್ಲ ಶರಣರು ತಮ್ಮ ವಚನ, ಕಾಯಕಗಳ ಮೂಲಕ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದು, ಇವರುಗಳು ಒಂದು ಜಾತಿಗೆ ಸೀಮಿತವಾಗಿರದೇ ಇಡೀ ಸಮಾಜದ ಆಸ್ತಿಯಾಗಿದ್ದರು. ಇವರ ಜಯಂತಿಯನ್ನು ಎಲ್ಲ ಸಮುದಾಯದವರೂ ಕೂಡಿ ಆಚರಿಸಬೇಕಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಸಮಾಜ ತಿದ್ದುವ ಕಾರ್ಯ ಮಾಡಿದ ಶರಣರ ವಚನಗಳನ್ನು ಇಂದು ಹೆಕ್ಕಿ ತೆಗೆಯಬೇಕಾಗಿದೆ. ವಚನಗಳಲ್ಲಿನ ಸಾಮಾಜಿಕ ಕಳಕಳಿಯನ್ನು ಅರಿತುಕೊಂಡು ಸಮಾಜ ಸುಧಾರಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು. ಶರಣರ ವಚನಗಳ ಹೆಚ್ಚಿನ ಪ್ರಚಾರವಾಗಬೇಕು, ಇದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು” ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

ವಿಧಾನ ಪರಿಷತ್ ಶಾಸಕ‌ ಎಸ್ ವಿ ಸಂಕನೂರ ಮಾತನಾಡಿ, “ಮೂರು ಮಂದಿ ಶರಣರು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಅವರ ಅನುಯಾಯಿಗಳಾದಂತವರು, ಬಸವಣ್ಣನವರು ಸಮಾಜದಲ್ಲಿನ ಮೇಲು-ಕೀಳು ಭಾವನೆಗಳನ್ನು ತೆಗೆದುಹಾಕಿ ಜ್ಯಾತ್ಯತೀತ ಸಮಾಜ ಕಟ್ಟಿದರು. ಮಾದಾರ ಚನ್ನಯ್ಯನವರ ಪ್ರತಿ ವಚನದಲ್ಲಿ ಜಾತಿ ಪದ್ಧತಿ ಹೋಗಲಾಡಿಸಲು ಬಸವಣ್ಣನವರ ಜೊತೆ ಹೋರಾಡಿದರು. ಕಾಯಕ ಶರಣರು ತಮ್ಮ ಕಾಯಕದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವ ಮೂಲಕ ಸಮಾಜ ಸುಧಾರಣೆಗೆ ತಮ್ಮನ್ನು ತೊಡಗಿಸಿಕೊಂಡಿದ್ದು, ಅವರ ಜೀವನ ಹಾಗೂ ವಚನಗಳಂತೆ ಪ್ರತಿಯೊಬ್ಬರೂ ದುಡಿದು ಊಟ ಮಾಡುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ತಿಳಿಸಿದ್ದರು” ಎಂದರು.

“ಸಮಾಜದಲ್ಲಿನ ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಅನೇಕ ಮಹನೀಯರು ನಾನಾ ರೀತಿಯ ಹೋರಾಟಗಳನ್ನು ಮಾಡಿರುತ್ತಾರೆ. ಸಮಾಜದಲ್ಲಿನ ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿ ಇದ್ದು, ವಿಧ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ಸಮಾಜ ಸುಧಾರಣೆಗೆ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪೋಕ್ಸೊ ಪ್ರಕರಣ ಮರೆಮಾಚಲು ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ಹುಲಕೋಟಿ ಜಿಸಿಟಿಎಂ ಪದವಿ ಪೂರ್ವ ಕಾಲೇಜಿನ ಹಿರಿಯ ಶ್ರೇಣಿಯ ಕನ್ನಡ ಉಪನ್ಯಾಸಕ ಡಾ. ಅರ್ಜುನ ಗೊಳಸಂಗಿ ಅವರು ಕಾಯಕ ಶರಣರ ಜೀವನ ಮತ್ತು ಸಂದೇಶ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ ಬಿ ಸಂಕದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ಸಮಾಜದ ಗಣ್ಯರು, ಸಾರ್ವಜನಿಕರು, ವಿಧ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X