ಕೆಂಪಣ್ಣ ಕಮಿಷನ್‌ ಆರೋಪ | ‘ಪೇ ಸಿದ್ದರಾಮಯ್ಯ’, ‘ಎಟಿಎಂ ಸಿದ್ದರಾಮಯ್ಯ’, ಯಾವ ಪೋಸ್ಟರ್‌ ಅಂಟಿಸಿಕೊಳ್ಳುತ್ತೀರಾ?: ಆರ್‌ ಅಶೋಕ್‌ ಕಿಡಿ

Date:

Advertisements

“ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಷನ್‌ನ ಗುರುತರ ಆರೋಪ ಮಾಡಿದ್ದಾರೆ. ಕಮಿಷನ್‌ ಕೊಡುವವರಿಗೆ ಬಿಲ್‌ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಷನ್‌ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ನಾವು ಕೂಡ ತಿಳಿಸಿದ್ದೆವು. ಲಂಚ ಕೊಡುತ್ತಿರುವವರ ಸಂಘದವರೇ ಹೇಳಿರುವುದರಿಂದ ಇದು ಲೂಟಿಕೋರ ಸರ್ಕಾರ, 75 ಪರ್ಸೆಂಟ್‌ ಸರ್ಕಾರ ಎಂಬುದು ಕಂಡುಬಂದಿದೆ” ಎಂದು ಆರೋಪಿಸಿದರು.

“ತೆರಿಗೆ ಅಧಿಕಾರಿಗಳು ದಾಳಿ ಮಾಡಿದಾಗಲೂ ಕಾಂಗ್ರೆಸ್ ಬೆಂಬಲಿಗರ ಮನೆಗಳಲ್ಲಿ ಎರಡು ಕಡೆ ಐವತ್ತು- ಐವತ್ತು ಕೋಟಿ ಹಣ ಸಿಕ್ಕಿದೆ. ಇದು ಲೂಟಿ ಹೊಡೆದ ಹಣ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಎಂದು ಪ್ರಶ್ನಿಸಿದರು. ಈ ಹಿಂದೆ ಐದು ರಾಜ್ಯಗಳ ಚುನಾವಣೆಗಾಗಿ ಲೂಟಿ ನಡೆಯಿತು. ಈಗ ಮುಂದೆ ಬರುವ ಲೋಕಸಭಾ ಚುನಾವಣೆಗೆ ಎತ್ತುವಳಿ ನಡೆಯುತ್ತಿದೆ. ಎಲ್ಲವನ್ನೂ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

Advertisements

ಯಾರ ಮುಖದ ಮೇಲೆ ಅಂಟಿಸಿಕೊಳ್ಳುತ್ತಾರೆ

“ಇದೇ ಕೆಂಪಣ್ಣ ನಮ್ಮ ಸರಕಾರದ ಅವಧಿಯಲ್ಲಿ ಆರೋಪ ಮಾಡಿದಾಗ ಸಿಎಂ ಸಿದ್ದರಾಮಯ್ಯನವರು ಪೇಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಈಗ ಯಾರ ಮುಖದ ಮೇಲೆ ಯಾವ ಪೋಸ್ಟರ್‌ ಅಂಟಿಸಿಕೊಳ್ಳುತ್ತಾರೆ? ಪೇ ಸಿದ್ದರಾಮಯ್ಯ, ಎಟಿಎಂ ಸಿದ್ದರಾಮಯ್ಯ ಎಂದು ಅಂಟಿಸಿಕೊಳ್ಳುತ್ತಾರಾ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ ಎನ್ನುವ ಸ್ಥಿತಿ ಸಿಎಂ ಸಿದ್ದರಾಮಯ್ಯನವರದ್ದು. ಅಂದು ರೋಷಾವೇಶದಿಂದ ಮಾತನಾಡುತ್ತಿದ್ದ ಅವರು ಈಗ ಎರಡು ನಾಲಿಗೆಯನ್ನು ತೋರಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಲೂಟಿ ಮಾಡುತ್ತಿದ್ದು, ಎಂಟೇ ತಿಂಗಳಲ್ಲಿ ಸರ್ಕಾರಕ್ಕೆ ಭ್ರಷ್ಟಾಚಾರದ ಆರೋಪ ಬಂದಿದೆ. ಇನ್ನು ಸಿದ್ದರಾಮಯ್ಯನವರು ಒಂದು ನಿಮಿಷವೂ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರದೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

“ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿದರೆ ಕೂಡಲೇ ನಮ್ಮ ಬಳಿ ಇರುವ ದಾಖಲೆಗಳನ್ನು ನೀಡುತ್ತೇವೆ. ಇವರು ಪ್ರಾಮಾಣಿಕರೇ ಆಗಿದ್ದರೆ, ನಯಾ ಪೈಸೆಯೂ ಭ್ರಷ್ಟಾಚಾರ ಆಗಿಲ್ಲ ಎನ್ನುವವರಾದರೆ ಸಿಬಿಐ ತನಿಖೆಗೆ ನೀಡಲಿ. ಕೆಂಪಣ್ಣ ಅವರು ಆರೋಪ ಮಾಡಿದ ಎಲ್ಲವನ್ನೂ ತನಿಖೆಗೆ ನೀಡಲಿ” ಎಂದು ಸವಾಲು ಹಾಕಿದರು.

ಹಕ್ಕುಚ್ಯುತಿ ಮಂಡಿಸಲಿ

“ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶ್ವೇತಪತ್ರವನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಅದರಲ್ಲಿ ತಪ್ಪಿದ್ದರೆ, ಏನಾದರೂ ಅನುಮಾನಗಳಿದ್ದಲ್ಲಿ ಹಕ್ಕುಚ್ಯುತಿ ಮಂಡಿಸಲು ಅವಕಾಶವಿದೆ. ಧಮ್‌ ಇದ್ದರೆ ಕಾಂಗ್ರೆಸ್‌ ನಾಯಕರು ಹಕ್ಕುಚ್ಯುತಿ ಮಂಡಿಸಲಿ” ಎಂದು ಒತ್ತಾಯಿಸಿದರು.

“ಎಸ್‌ಡಿಪಿಐ ಅಧ್ಯಕ್ಷರ ಹೇಳಿಕೆ ದೇಶದ್ರೋಹದ ಹೇಳಿಕೆ. ಪಿಎಫ್‌ಐ, ಕೆಎಫ್‌ಡಿ ಸಂಘಟನೆಗಳ ಅಂಗಸಂಸ್ಥೆಯೇ ಎಸ್‌ಡಿಪಿಐ. ಅಲ್ಲಿ ಇದ್ದವರೇ ಇಲ್ಲಿ ಬಂದು ಸೇರಿಕೊಂಡಿದ್ದಾರೆ. ಕೋರ್ಟ್‌ ಆದೇಶದ ಪ್ರಕಾರ ಜ್ಞಾನವಾಪಿಯಲ್ಲಿ ಶಿವನ ಪೂಜೆಗೆ ಅವಕಾಶ ಸಿಕ್ಕಿದೆ. ಜ್ಞಾನವಾಪಿ ಹಿಂದೂ ಮಂದಿರ ಎನ್ನುವುದು ಜಗತ್ತಿಗೇ ಗೊತ್ತಿದೆ. ಇದು ತಪ್ಪು ಎಂದಾದರೆ ಸುಪ್ರೀಂ ಕೋರ್ಟ್‌ಗೆ ಹೋಗಲಿ. ಪುರಾತತ್ವ ಇಲಾಖೆಯವರು ಎಲ್ಲವನ್ನೂ ಸಮೀಕ್ಷೆ ಮಾಡಲಿ. ಮಂದಿರಗಳನ್ನು ಮರಳಿ ಹಿಂದೂಗಳಿಗೆ ನೀಡಬೇಕೆನ್ನುವುದು ಬಿಜೆಪಿ ನಿಲುವು. ಅದನ್ನು ಕಾನೂನು ಪ್ರಕಾರವೇ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X