ಬೀದರ್ | ಸಂವಿಧಾನ ಜಾಗೃತಿ ಜಾಥಾಕ್ಕೆ ಅಡ್ಡಿ: 11 ಜನರ ವಿರುದ್ಧ ಪ್ರಕರಣ ದಾಖಲು, ಇಬ್ಬರ ಬಂಧನ

Date:

Advertisements

ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ ನಡೆಸಿದ ಅದೇ ಗ್ರಾಮದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಧನ್ನೂರಾ ಠಾಣೆ ಪೊಲೀಸರು ಶನಿವಾರ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

“ಸಮಾಜ ಕಲ್ಯಾಣ ಇಲಾಖೆಯಿಂದ ಮಾಳಚಾಪೂರ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಈ ವೇಳೆ ಆಗಮಿಸಿದ ಯುವಕರ ಗುಂಪು ‘ಬನಾಯೆಂಗೆ ಮಂದಿರ’ ಹಾಡು ಹಾಕಿ ಎಂದು ಆಯೋಜಕರನ್ನು ಬಲವಂತ ಮಾಡಿದ್ದಾರೆ. ಬಳಿಕ ಗ್ರಾಮ ಪಂಚಾಯತ್ ಮುಂದೆ ನಡೆದ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಮತ್ತೆ ಆಗಮಿಸಿದ ಗುಂಪು ಭಗವಾ ಧ್ವಜಗಳೊಂದಿಗೆ ಬಂದು, ಕುಣಿದು ದಾಂದಲೆ ನಡೆಸಿ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ” ಎಂದು ಪರಿಶಿಷ್ಟ ಜಾತಿಯ ಷಣ್ಮುಖ ಶರಣಪ್ಪ ಹೊಸದೊಡ್ಡಿ ಅವರು ಧನ್ನೂರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

“ಈ ಕುರಿತು ಧನ್ನೂರಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ” ಎಂದು ಧನ್ನೂರಾ ಪಿಎಸ್‌ಐ ಈದಿನ.ಕಾಮ್‌ ಜೊತೆಗೆ ಮಾತನಾಡಿ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಮಾದ; ಪ್ರಯಾಣಿಕರ ʼದಾರಿ ತಪ್ಪಿಸುವʼ ನಾಮಫಲಕ!

“ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಭೇಟಿ ನೀಡಿ ಸಂವಿಧಾನ ಪೀಠಿಕೆ ಓದಿ, ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ನೆರವೇರಿಸಿದರು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಅತಿವೃಷ್ಟಿ ಹಾನಿ | ಔರಾದ ಕ್ಷೇತ್ರಕ್ಕೆ ವಿಶೇಷ ಅನುದಾನ ಕೊಡಿ : ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಬೀದರ್‌ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ...

ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ...

ಬೀದರ್‌ | ವಿನಯ ಮಾಳಗೆಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರೂ ಆದ ಬೀದರ್‌ನ ಟೀಂ ಯುವಾ...

Download Eedina App Android / iOS

X