ದಾವಣಗೆರೆ | ಬರದ ಬವಣೆಗೆ 1 ಲಕ್ಷ 50 ಸಾವಿರ ಹೆಕ್ಟೇರ್ ಬೆಳೆ ನಾಶ

Date:

Advertisements

ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಹುತೇಕ ನಾಶವಾಗಿದೆ. ಮುಂಗಾರು ವೇಳೆ 2 ಲಕ್ಷದ 27 ಸಾವಿರ ಹೇಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಮಳೆ ಕೈಕೊಟ್ಟ ಕಾರಣ 1 ಲಕ್ಷದ 50 ಸಾವಿರ ಹೇಕ್ಟರ್ ‌ಪ್ರದೇಶದ ಬೆಳೆಗೆ ಸಂಪೂರ್ಣ ಹಾನಿಯಾಗಿದೆ. ಮೆಕ್ಕೆಜೋಳ, ರಾಗಿ, ಈರುಳ್ಳಿ ಹೀಗೆ ಎಲ್ಲವೂ ಒಣಗಿ ಹೋಗಿವೆ.

ಇತ್ತೀಚಿಗೆ ಕೇಂದ್ರದ ಬರ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತ್ತು. ದಾವಣಗೆರೆ ಜಿಲ್ಲೆಯಲ್ಲಿ 47 ಸಾವಿರ ರೈತರು ಈಗಾಗಲೇ ಬೆಳೆ ವಿಮೆ ಮಾಡಿಸಿದ್ದಾರೆ.

Advertisements

ಜಿಲ್ಲೆಯಲ್ಲಿ ಅಡಕೆ ತೋಟವೂ ಒಣಗುತ್ತಿದ್ದು ಬೆಳೆ ಕೈಗೆ ಬಾರದೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದಿಂದ ಸೂಕ್ತ ಬರ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಅಂತರ್ಜಲ ಮಟ್ಟ ಕುಸಿದಿದ್ದು, ಬೋರ್‌ವೆಲ್​​ಗಳಲ್ಲಿ ನೀರು ಪಾತಾಳ ತಲುಪಿದೆ. ಕೆರೆ-ಕಟ್ಟೆಗಳು ಬತ್ತಿದ್ದು, ಹನಿ ನೀರಿಗೂ ಜನರು ಪರದಾಡುವ ಸ್ಥಿತಿಯಿದೆ. ಮೊದಲು ಬಾವಿ ಕೊರೆದರೆ 180ರಿಂದ 250 ಅಡಿಯಲ್ಲಿ ನೀರು ಸಿಗುತ್ತಿತ್ತು. ಆದರೆ, ಈಗ ಬರೋಬ್ಬರಿ 600ರಿಂದ 800 ಅಡಿ ಬೋರ್‌​ವೆಲ್ ಕೊರೆದರೂ ನೀರು ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಜಿಲ್ಲೆಯ ರೈತರು.

ದಾವಣಗೆರೆ, ಹೊನ್ನಾಳಿ, ಹರಿಹರ, ಜಗಳೂರು, ಚನ್ನಗಿರಿ ಹಾಗೂ ನ್ಯಾಮತಿಯ ಒಟ್ಟು 6 ತಾಲೂಕುಗಳನ್ನು ಬರಪೀಡಿತ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಕಳೆದ 25 ವರ್ಷಗಳಲ್ಲಿ 16 ವರ್ಷ ಜಗಳೂರು ತಾಲೂಕು ಬರದಿಂದ ನಲುಗಿದೆ. ಬರದ ಹೊಡೆತ ಜಾನುವಾರುಗಳು, ಪ್ರಾಣಿ, ಪಕ್ಷಿಗಳಿಗೂ ತಟ್ಟಿದ್ದು ನೀರಿಲ್ಲದೇ ನಲುಗುತ್ತಿವೆ. ಜಾನುವಾರುಗಳಿಗಾಗಿ ಗೋ ಶಾಲೆಗಳನ್ನು ಆರಂಭಿಸಿ ಮೇವು ಪೂರೈಸುವಂತೆ ಜಿಲ್ಲೆಯ ರೈತರು ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X