ಕಬ್ಬನ್ ಪಾರ್ಕ್‌ | ಬಹುಮಹಡಿ ಕಟ್ಟಡ ವಿವಾದ, ಬೆಂಗಳೂರಿಗರ ಪ್ರತಿಭಟನೆ

Date:

Advertisements

ಕರ್ನಾಟಕ ಸರ್ಕಾರ ಬೆಂಗಳೂರಿನ ಪ್ರಸಿದ್ಧ ಕಬ್ಬನ್‌ ಪಾರ್ಕ್‌ ಪ್ರದೇಶದಲ್ಲಿ 10 ಮಹಡಿಯ ಕಟ್ಟಡವೊಂದನ್ನು ಮೇಲೇಳಿಸಲು ಸಿದ್ಧತೆ ನಡೆಸುತ್ತಿದೆ ಎನ್ನುವುದು ಇತ್ತೀಚೆಗೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಈಗಿನ ಪ್ರಸ್ತಾಪದಲ್ಲಿ, ಕಬ್ಬನ್‌ ಪಾರ್ಕ್‌ ಪ್ರದೇಶದ ಪ್ರೆಸ್ ಕ್ಲಬ್‌ ಪಕ್ಕದಲ್ಲಿ ಹಿಂದೆ ಚುನಾವಣಾ ಆಯೋಗದ ಕಚೇರಿ ಇದ್ಧ ಜಾಗದಲ್ಲಿ ಬಹುಮಹಡಿಯ ಕಟ್ಟಡವೊಂದನ್ನು ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎನ್ನುವ ಬಗ್ಗೆ ನಾಗರಿಕರು ಮತ್ತು ಪರಿಸರ ಸಂರಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಉದ್ಯಾನವನಕ್ಕೆ ನಿತ್ಯವೂ ಭೇಟಿ ನೀಡುವವರು ಈಗಿನ ಬಹುಮಹಡಿ ಕಟ್ಟಡಕ್ಕೆ ಸರ್ಕಾರದ ಪ್ರೋತ್ಸಾಹದ ವಿರುದ್ಧ ಪ್ರತಿಭಟಿಸುತ್ತಿದ್ದು, ತಕ್ಷಣವೇ ಅಂತಹ ನಿರ್ಧಾರಕ್ಕೆ ತಡೆಯೊಡ್ಡಲು ಒತ್ತಾಯಿಸಿದ್ದಾರೆ. ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಶನ್‌ ವಕೀಲ ಮತ್ತು ಅಧ್ಯಕ್ಷ ಎಸ್ ಉಮೇಶ್ ಕುಮಾರ್ ನೇತೃತ್ವದಲ್ಲಿ ಕಳೆದ ಭಾನುವಾರ ಕೇಂದ್ರ ಗ್ರಂಥಾಲಯದ ಬಳಿ ಜನರು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರಿದಿದೆ.

Advertisements

ಪ್ರಸ್ತಾಪಿತ ಕಟ್ಟಡದ ಜಾಗ ಕಬ್ಬನ್‌ ಪಾರ್ಕ್‌ನ ಪ್ರೆಸ್‌ ಕ್ಲಬ್‌ನ ಪಕ್ಕದಲ್ಲಿದೆ. ಈ ಜಾಗದ ಮರುಅಭಿವೃದ್ಧಿಯಾಗುವ ಅಗತ್ಯ ಹಿಂದಿನಿಂದಲೇ ಇತ್ತು. ಆದರೆ ಉದ್ಯಾನವನದ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಮರುಅಭಿವೃದ್ಧಿ ಹೇಗೆ ಎನ್ನುವ ಪ್ರಶ್ನೆ ಮುಂದಿತ್ತು. ಕಬ್ಬನ್‌ ಪಾರ್ಕ್‌ ಮೇಲ್ವಿಚಾರಣೆ ಜವಾಬ್ದಾರಿ ಹೊಂದಿರುವ ತೋಟಗಾರಿಕಾ ಇಲಾಖೆ ಈ ನಿಟ್ಟಿನಲ್ಲಿ ಪ್ರಮುಖ ಸಭೆ ನಡೆಸಿದೆ. ಆದರೆ ರಾಜ್ಯ ಸರ್ಕಾರ ಇನ್ನೂ ತನ್ನ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಐತಿಹಾಸಿಕವಾಗಿ 1975ರ ಕರ್ನಾಟಕ ಸರ್ಕಾರ ಉದ್ಯಾನವನಗಳ ಕಾಯ್ದೆ ಜಾರಿಗೆ ಬಂದಂದಿನಿಂದ ಅಭಿವೃದ್ಧಿ ಚಟುವಟಿಕೆಗಳಿಂದ ಕಬ್ಬನ್‌ ಪಾರ್ಕ್‌ ಅನ್ನು ಹೊರಗಿಡಲಾಗಿತ್ತು. ಆದರೆ 2019ರಲ್ಲಿ ಈಗಿನ ಮರಗಳನ್ನು ಕಡಿಯದೆ ಮರುಅಭಿವೃದ್ಧಿಗೆ ಹೈಕೋರ್ಟ್ ಷರತ್ತುಬದ್ಧ ಅನುಮೋದನೆ ನೀಡಿದಾಗ ನಿರ್ಮಾಣದ ಅವಕಾಶ ತೆರೆದುಕೊಂಡಿತ್ತು.

ಆದರೆ, ಈ ಸ್ಥಳದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣವಾಗಲಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್ ‘ಎಕ್ಸ್‌’ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ನಂತರ ಪರಿಸರವಾದಿಗಳು ಮತ್ತು ಬೆಂಗಳೂರಿಗರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಕಬ್ಬನ್‌ ಪಾರ್ಕ್‌ನ ಹೃದಯಭಾಗದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ನಗರದ ಹಸಿರು ಹೊದಿಕೆಗೆ ಬೆದರಿಕೆ ಒಡ್ಡಲಿದೆ. ಮಾತ್ರವಲ್ಲ, ಜನಸಂಚಾರ ಹೆಚ್ಚಾಗಿ ವಾಹನದಟ್ಟಣೆ ಮತ್ತು ಮಾಲಿನ್ಯ ಸಮಸ್ಯೆ ಎದುರಾಗಬಹುದು. ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ಬೆಂಗಳೂರಿನ ಪರಿಸರಕ್ಕೆ ಹಾನಿಯಾಗುವಂತೆ ಚಟುವಟಿಕೆಗಳನ್ನು ನಡೆಸಿರುವ ಪರಿಣಾಮವನ್ನು ನಗರ ಎದುರಿಸುತ್ತಿದೆ. ಹೀಗಿರುವಾಗ ಪರಿಸರವಾದಿಗಳು ಮತ್ತು ನಾಗರಿಕರ ಕಳವಳಕ್ಕೆ ಕಾರಣವಿದೆ.

ದೆಹಲಿಯಂತಹ ಮಹಾನಗರಿಗಳಲ್ಲಿ ಮಾಲಿನ್ಯ ಸಮಸ್ಯೆಯನ್ನು ಕಣ್ಣಾರೆ ಕಂಡಿರುವ ಭಾರತ ಮತ್ತು ರಾಜ್ಯ ಸರ್ಕಾರಗಳು ಮಹಾನಗರಗಳಲ್ಲಿ ಯಾವುದೇ ಮರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಪರಿಸರದ ಕಡೆಗೆ ಅತಿಹೆಚ್ಚಿನ ಗಮನವನ್ನು ನೀಡಿ, ಅಭಿವೃದ್ಧಿಯ ಅಗತ್ಯವನ್ನು ಪರಿಗಣಿಸುವ ಅಗತ್ಯವಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

Download Eedina App Android / iOS

X