ಗದಗ | 15 ಗ್ರಾಮಗಳಲ್ಲಿ ಚಿರತೆ ಆತಂಕ; ಎಚ್ಚರಿಕೆಯಿಂದ ಓಡಾಡಲು ಅಧಿಕಾರಿಗಳಿಂದ ಸೂಚನೆ

Date:

Advertisements

ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು ಒಬ್ಬೊಬ್ಬರಾಗಿ ಓಡಾಡದೇ ಗುಂಪು ಗುಂಪಾಗಿ ಓಡಾಡುವಂತೆ ಅರಣ್ಯಾಧಿಕಾರಿಗಳು ಸೂಚಿಸಿದ್ದಾರೆ.

ರಾತ್ರಿ ಬೆಳೆಗಳಿಗೆ ನೀರುಣಿಸಲು ಹೋಗುವ ರೈತರು ಭಯದಿಂದ ಹೊರಗೇ ಬರುತ್ತಿಲ್ಲ. ಗಜೇಂದ್ರಗಡದ ಗಿರಣಿ ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕತ್ತಲಾಗುವ ಮೊದಲೇ ಮನೆಗೆ ಮರಳುತ್ತಿದ್ದಾರೆ. ತಡವಾದರೆ ಹಳ್ಳಿಗಳಿಗೆ ಬಾರದೇ ಬಸ್ ನಿಲ್ದಾಣ ಅಥವಾ ಪಟ್ಟಣದಲ್ಲಿ ರಾತ್ರಿ ಕಳೆಯುತ್ತಿದ್ದಾರೆ. ಚಿರತೆ ಸರೆಗೆ ಅರಣ್ಯಾಧಿಕಾರಿಗಳು ಪ್ರಯತ್ನಿಸುತ್ತಿದ್ದು ಈವರೆಗೂ ಚಿರತೆ ಸಿಕ್ಕಿಲ್ಲ.

ಮೋಕಾ ಕ್ರಾಸ್‌ನಲ್ಲಿ ಗ್ರಾಮಸ್ಥರಿಗೆ ಚಿರತೆ ಕಾಣಿಸಿಕೊಂಡಿದೆ. ಕುಂಟೋಜಿಯ ಮರದ ಮೇಲೆ ಚಿರತೆಯ ಹೆಜ್ಜೆ ಗುರುತು ಕಂಡುಬಂದಿವೆ. ಅದೇ ದಿನ ರಾತ್ರಿ ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಬೋನನ್ನು ಹಾಕಿದ್ದರೂ ಚಿರತೆ ಅದರಲ್ಲಿ ಸಿಕ್ಕಿಬಿದ್ದು, ಕೂಡಲೇ ತಪ್ಪಿಸಿಕೊಂಡಿದೆ ಎನ್ನುತ್ತಾರೆ ಗ್ರಾಮದ ಜನ.

Advertisements

ಚಿರತೆ ಭಯದಿಂದ ಹೊಲಗಳಿಗೆ ನೀರುಣಿಸುವ ರೈತರು ರಾತ್ರಿ 10 ಗಂಟೆಗೆ ಮೋಟಾರ್ ಸ್ಟಾರ್ಟ್ ಮಾಡಿ ಮನೆಗೆ ಬರುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್‌ ಸರಬರಾಜು ನಿಂತರೆ, ನೀರು ಹರಿಯುವುದು ನಿಲ್ಲುತ್ತದೆ ಇದು ಬೆಳೆಗಳನ್ನು ಹಾಳುಮಾಡುತ್ತದೆ ಎನ್ನುವುದು ಇಲ್ಲಿನ ರೈತರ ಆತಂಕ.

ಒಟ್ಟಿನಲ್ಲಿ ಸುಮಾರುದಿನಗಳಿಂದ ಚಿರತೆಯ ಭಯದಲ್ಲಿ 15 ಗ್ರಾಮಗಳ ಜನ ಜೀವನ ನಡೆಸುತ್ತಿದ್ದು, ಆದಷ್ಟು ಬೇಗ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X