ಶಿವಮೊಗ್ಗ | ಸಿಗ್ನಲ್‌ ಲೈಟ್ ಅಳವಡಿಸುವಂತೆ ಎಎಪಿ ಆಗ್ರಹ

Date:

Advertisements

ಶಿವಮೊಗ್ಗದ ಎನ್‌ಬಿ ರಸ್ತೆ, ಟೆಂಪೋ ಸ್ಟ್ಯಾಂಡ್ ಬಳಿಯ ವೃತ್ತದಲ್ಲಿ ಟ್ರಾಫಿಕ್ ಅವ್ಯವಸ್ಥೆ ಹಾಗೂ ಸಿಗ್ನಲ್‌ಲೈಟ್ ಅಳವಡಿಸದೇ ಅಪಘಾತಗಳಿಗೆ ಕಾರಣವಾಗುತ್ತಿರುವುದರಿಂದ ಕೂಡಲೇ ಟ್ರಾಫಿಕ್ ವ್ಯವಸ್ಥೆಯನ್ನು ಸುರಕ್ಷಿತಗೊಳಿಸುವಂತೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ(ಎಎಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ಆಮ್ ಅದ್ದಿ ಪಾರ್ಟಿಯಿಂದ ಕಳೆದ ಅಕ್ಟೋಬರ್‌ 31ರಂದು ಟ್ರಾಫಿಕ್‌ ಅವ್ಯವಸ್ಥೆಯ ಕುರಿತು ಪ್ರತಿಭಟನೆ ನಡೆಸಿದ್ದು, ಟೆಂಪೋ ಸ್ಟ್ಯಾಂಡ್‌ ಬಳಿಯ ವೃತ್ತದಲ್ಲಿ ಸಿಗ್ನಲ್‌ ಅಳವಡಿಸುವಂತೆ ಹಲವು ಮನವಿ ಮಾಡಿದ್ದೆವು. ಆದರೂ, ಈವರೆಗೆ ಜಿಲ್ಲಾಧಿಕಾರಿ, ಟ್ರಾಫಿಕ್ ನಿಯಂತ್ರಣ ಅಧಿಕಾರಿಗಳು, ಯಾವುದೇ ಗಂಭೀರ ನಿರ್ಧಾರ ಅಥವಾ ಸೂಕ್ತಕ್ರಮ ವಹಿಸದೇ ಇರುವುದು ಖಂಡನೀಯ. ಇದರಿಂದ ಹಲವಾರು ರಸ್ತೆ ಅಪಘಾತಗಳು ಸಂಭವಿಸಿ ಪ್ರಾಣಹಾನಿ ಸಂಭವಿಸಿರುತ್ತವೆ” ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

“ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಂಗಳವಾರದಂದು ಮತ್ತೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಗ್ನಲ್ ಲೈಟ್ ಆಳವಡಿಸಿ ಟ್ರಾಫಿಕ್ ಅವ್ಯವಸ್ಥೆ ಸರಿಪಡಿಸಬೇಕು. ಟ್ರಾಫಿಕ್‌ ಸುವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

Advertisements

“ಶಿವಮೊಗ್ಗ ನಗರದ ಮುಖ್ಯ ಭಾಗಗಳಾದ ಗಾಡಿಕೊಪ್ಪ, ಟೆಂಪೋ ಸ್ಟ್ಯಾಂಡ್, ಸೂಳೆಬೈಲು, ನ್ಯೂಮಂಡ್ಲಿ ಎಂಆರ್‌ಎಸ್ ಸರ್ಕಲ್, ಇಲ್ಯಾಸ್ ನಗರ ಸರ್ಕಲ್ ಇನ್ನೂ ಹಲವು ಭಾಗಗಳಲ್ಲಿ ನಿತ್ಯವೂ ಅತಿ ಹೆಚ್ಚು ವಾಹನ ದಟ್ಟಣೆಯಾಗುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಮೀಪದಲ್ಲಿಯೇ ಶಾಲೆಗಳಿದ್ದು, ಮಕ್ಕಳಿಗೆ, ಪಾದಚಾರಿಗಳಿಗೆ, ನಾಗರಿಕರಿಗೆ ಓಡಾಡಲು ಅನಾನುಕೂಲವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹ

“ಟ್ರಾಫಿಕ್‌ ಸಿಗ್ನಲ್‌ ವ್ಯವಸಾಥೆ ಇಲ್ಲದಿರುವುದರಿಂದ ರಸ್ತೆ ದಾಟುವ ಸಂದರ್ಭದಲ್ಲಿ ಹಲವು ರೀತಿಯ ವಾಹನ ಅಫಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಶಿವಮೊಗ್ಗ ಜಿಲ್ಲಾ ಆಮ್ ಆದಿ ಪಾರ್ಟಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X