ಮಂಡ್ಯ ಜಿಲ್ಲಾ ನಾಯಕರ ಸಭೆ ನಡೆಸಿದ ಜೆಡಿಎಸ್ ವರಿಷ್ಠ ದೇವೇಗೌಡ; ಕುಮಾರಸ್ವಾಮಿ ಸ್ಪರ್ಧೆ ಖಚಿತ?

Date:

Advertisements

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಎಚ್‌ ಡಿ ಕುಮಾರಸ್ವಾಮಿ ಮತ್ತು ನನಗೆ (ದೇವೇಗೌಡ) ಹಾಗೂ ನಿಖಿಲ್ ಕುಮಾರಸ್ವಾಮಿಗೆ ಒತ್ತಾಯವಿದೆ. ಆದರೆ, ನಾನು ಸ್ಪರ್ಧಿಸಲ್ಲ ಎಂದು ತಿಳಿಸಿದ್ದೇನೆ. ಹಾಗೇ ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಸ್ಪರ್ಧೆ ಖಚಿತ ಎಂಬುದನ್ನು ಪರೋಕ್ಷವಾಗಿ ಹೆಚ್‌ ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್​ ಪಾಲಾಗುವುದು ಬಹುತೇಕ ಖಚಿತ ಎಂಬರ್ಥದಲ್ಲಿ ಮಾತನಾಡಿದರು.

“ತಮ್ಮ ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಆಗಿದೆ. ಕುಮಾರಸ್ವಾಮಿ ಅವರು ಇವತ್ತು ಸಭೆಯಲ್ಲಿ ಇರಲಿಲ್ಲ. ಅಂತಿಮವಾಗಿ ಲೋಕಸಭೆ ಬಗ್ಗೆ ನಾವು ಒಂದು ಅಭಿಪ್ರಾಯ ತಗೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.

Advertisements

“ನಾವು ಮೂವರಲ್ಲಿ(ದೇವೇಗೌಡ, ನಿಖಿಲ್, ಕುಮಾರಸ್ವಾಮಿ) ಒಬ್ಬರು ಮಂಡ್ಯದಿಂದ ಸ್ಪರ್ಧಿಸಿ ಎಂದು ಹೇಳುತ್ತಿದ್ದಾರೆ. ಅಭ್ಯರ್ಥಿ ಕುರಿತು ಅಭಿಪ್ರಾಯ ಸಂಗ್ರಹಿಸಿ, ನಮ್ಮ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಅಂತಿಮವಾಗಿ ನರೇಂದ್ರ ಮೋದಿ, ಜೆ ಪಿ ನಡ್ಡಾ, ಕುಮಾರಸ್ವಾಮಿ, ಬಿ ಎಸ್ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ಮಂಡ್ಯ ಕ್ಷೇತ್ರದ ಎಂಟು ಕ್ಷೇತ್ರದಲ್ಲೂಓಡಾಟ ನಡೆಸುತ್ತೇವೆ. ಇಲ್ಲಿ ಜೆಡಿಎಸ್- ಬಿಜೆಪಿ ಪ್ರಶ್ನೆ ಅಲ್ಲ. ಎನ್​ಡಿಎದಲ್ಲಿ ನಾವು ಇದ್ದೇವೆ. ಅಂತಿಮವಾಗಿ ಮೋದಿ, ನಡ್ಡಾ, ಕುಮಾರಸ್ವಾಮಿ,ಯಡಿಯೂರಪ್ಪ ಎಲ್ಲರೂ ಸಮಾಲೋಚನೆ ಮಾಡಿ ತೀರ್ಮಾನ ಮಾಡುತ್ತಾರೆ” ಎಂದು ಹೇಳಿದರು.

“ರೇವಣ್ಣ ಲೋಕಸಭೆಗೆ ಹೋಗುತ್ತೇನೆ ಎಂದು ಹೇಳಿಲ್ಲ. ಇದು ಮಾಧ್ಯಮದವರ ಸೃಷ್ಟಿ. ನಾವು ಮೂರು ಜನ ಒಗ್ಗಟ್ಟಾಗಿ ಹೋಗುತ್ತೇವೆ. ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ. ನಂತರ ನಾವು ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ” ಎಂದರು.

ಮಂಡ್ಯ ಲೋಕಸಭಾ ಸೀಟಿಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಸೀಟಿನ ಲಾಬಿಗಾಗಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು. ಈ ಭೇಟಿಯ ಬೆನ್ನಲ್ಲೇ ಮಂಡ್ಯ ಜಿಲ್ಲಾ ನಾಯಕರ ಸಭೆ ನಡೆಸುವ ಮೂಲಕ ಜೆಡಿಎಸ್ ವರಿಷ್ಠ ದೇವೇಗೌಡ, ಠಕ್ಕರ್ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X