ಜಾತಿ ದೌರ್ಜನ್ಯ | ಮದುವೆ ಮೆರವಣಿಗೆಯಲ್ಲಿ ದಲಿತ ವರನನ್ನು ಕುದುರೆಯಿಂದ ಇಳಿಸಿದ ಸವರ್ಣೀಯರು

Date:

Advertisements

ಮದುವೆ ಮೆರವಣಿಗೆಯಲ್ಲಿ ಕುದುರೆ ಮೇಲೆ ಸಾಗುತ್ತಿದ್ದ ದಲಿತ ವರನನ್ನು ಸರ್ಣೀಯರು ಬಲವಂತವಾಗಿ ಕುದುರೆಯಿಂದ ಕೆಳಗಿಸಿರುವ ಜಾತಿ ದೌರ್ಜನ್ಯದ ಘಟನೆ  ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಚಡಸಾನಾ ಗ್ರಾಮದಲ್ಲಿ ನಡೆದಿದೆ. ಪ್ರಬಲ ಜಾತಿಯವರು ವರನಿಗೆ ಜಾತಿ ನಿಂದನೆ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ವರನ ಸೋದರ ಸಂಬಂಧಿ ಮತ್ತು ಸಹೋದರ ಗಾಂಧಿನಗರದ ಮಾನಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ನಾಲ್ವರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರಿನ ಪ್ರಕಾರ, ಸೋಮವಾರ ಮಧ್ಯಾಹ್ನ ವರ ಸುಮಾರು 100 ಜನರೊಂದಿಗೆ ಮದುವೆ ಮೆರವಣಿಗೆಯಲ್ಲಿ ಕುದುರೆ ಮೇಲೆ ಸಾಗುತ್ತಿದ್ದರು. ಆಗ, ವ್ಯಕ್ತಿಯೊಬ್ಬ ಮೋಟಾರ್ ಸೈಕಲ್‌ನಲ್ಲಿ ಬಂದು ವರನಿಗೆ ಬೆದರಿಕೆ ಹಾಕಿದ್ದಾನೆ. ಬಲವಂತವಾಗಿ ವರನನ್ನು ಕುದುರೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾನೆ. ಅಲ್ಲದೆ, ಜಾತಿ ನಿಂದನೆ ಮಾಡಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ?: ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

“ನನ್ನ ಸಹೋದರನನ್ನು (ವರ) ಬಲವಂತವಾಗಿ ಕುದುರೆಯಿಂದ ಇಳಿಸಲಾಗಿದೆ. ನಂತರ, ನಮ್ಮ ಕುಟುಂಬ ಸದಸ್ಯರು ಆತನೊಂದಿಗೆ ಮಾತನಾಡಿ, ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದರು. ಆ ವೇಳೆ, ಇತರ ಮೂವರು ಸವರ್ಣೀಯರು ಬಂದು ನನ್ನ ಸಹೋದರನಿಗೆ ಜಾತಿ ನಿಂಧನೆ ಮಾಡಿದರು. ಅಲ್ಲದೆ, ಕುಟುಂಬದ ಸದಸ್ಯರೊಬ್ಬರಿಗೆ ಕಪಾಳಕ್ಕೆ ಹೊಡೆದಿದ್ದಾರೆ” ಎಂದು ವರನ ಸಹೋದರ ದೂರಿನಲ್ಲಿ ವಿವರಿಸಿದ್ದಾರೆ.

“ಕುದುರೆ ಸವಾರಿ ಮಾಡಲು ತಮ್ಮ ಅನುಮತಿ ಪಡೆಯಬೇಕೆಂದು ಸವರ್ಣೀಯರು ಹೇಳಿದರು. ಶಾಂತಿಯುತ ಮೆರವಣಿಗೆ ನಡೆಸಲು ನಾವು ಪ್ರಯತ್ನಿಸಿದೆವು. ಆದರೂ, ಸ್ಥಳದಿಂದ ಹೋಗುವಂತೆ ಅವರು ಕುದುರೆ ಮಾಲೀಕರು ಮತ್ತು ವಾದ್ಯದ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿದರು” ಎಂದು ಆರೋಪಿಸಿದ್ದಾರೆ.

ಗಾಂಧಿನಗರ ಕಲೋಲ್ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಮನ್ವಾರ್ ಮಂಗಳವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘‘ಘಟನೆಯ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X