ತಮಿಳುನಾಡು: ನ್ಯಾಯಾಧೀಶೆಯಾದ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ

Date:

Advertisements

ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ.

ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಯಾವುದೇ ಹೆಚ್ಚು ಸೌಕರ್ಯವಿಲ್ಲದ ಗಿರಿಧಾಮದ ಗ್ರಾಮದ ಬುಡಕಟ್ಟು ಸಮುದಾಯದ ಯುವ ಮಹಿಳೆಯೊಬ್ಬರು ಈ ಸಾಧನೆ ಮಾಡಿರುವುದಕ್ಕೆ ಸಂತಸವಾಗಿದೆ. ಈ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ ಹಾಗೂ ಮಹಿಳೆಯ ಸಾಧನೆಗೆ ಬೆನ್ನುಲುಬಾಗಿ ನಿಂತ ಆಕೆಯ ತಾಯಿ ಮತ್ತು ಪತಿಗೂ ಕೂಡ ಧನ್ಯವಾದ ತಿಳಿಸುತ್ತೇನೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಲು ಹಿಂಜರಿಕೆಪಡುವ ತಮಿಳುನಾಡಿನವರಿಗೆ ಶ್ರೀಪತಿಯವರ ಸಾಧನೆ ನಿಜಕ್ಕೂ ಮಾದರಿಯಾಗಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ದ್ರಾವಿಡ ಮಾದರಿಯ ಡಿಎಂಕೆ ಸರ್ಕಾರ ತಮಿಳುನಾಡಿನಲ್ಲಿ ಇತ್ತೀಚಿಗೆ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ನೀತಿಯನ್ನು ಜಾರಿಗೊಳಿಸಿತ್ತು.ಇದರಿಂದಾಗಿಯೇ ಶ್ರೀಪತಿಯಂಥವರು ನ್ಯಾಯಾಧೀಶರಾಗಲು ಸಾಧ್ಯವಾಗಿದೆ” ಎಂದು ಸ್ಟಾಲಿನ್ ತಿಳಿಸಿದ್ದಾರೆ.

ತಿರುವಣ್ಣಮಲೈ ಜಿಲ್ಲೆಯ ಜವುಧು ಗಿರಿಧಾಮದ ಪುಲಿಯೂರು ಗ್ರಾಮದವರಾದ ಶ್ರೀಪತಿ ಅವರು ನವೆಂಬರ್ 2023ರಲ್ಲಿ 200 ಕಿ.ಮೀ ದೂರದ ಚೆನ್ನೈಗೆ ಆಗಮಿಸಿ ಸಿವಿಲ್ ನ್ಯಾಯಾಧೀಶೆಯ ಪರೀಕ್ಷೆ ಬರೆದಿದ್ದರು.

ಪರೀಕ್ಷೆ ಇರುವ ಎರಡು ದಿನದ ಹಿಂದಷ್ಟೆ ಶ್ರೀಪತಿ ಮಗುವಿಗೆ ಜನ್ಮ ನೀಡಿದ್ದರು. ಆರೋಗ್ಯದ ಕಠಿಣ ಸಂದರ್ಭದಲ್ಲಿ ದೃಢ ನಿರ್ಣಯ ತೆಗೆದುಕೊಂಡು ಚೆನ್ನೈಗೆ ಆಗಮಿಸಿ ಪರೀಕ್ಷೆ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X