ತೆರಿಗೆ ಬಾಕಿ | ರಾಕ್ ಲೈನ್ ಮಾಲ್ ಸೀಲ್ ಮಾಡಿದ ಬಿಬಿಎಂಪಿ ಅಧಿಕಾರಿಗಳು

Date:

Advertisements

ಬಾಕಿ ತೆರಿಗೆ ಪಾವತಿಸದ ಕಾರಣ ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್‌ಲೈನ್ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬೀಗ ಜಡಿದಿದ್ದಾರೆ.

ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಫೆಬ್ರುವರಿ 14ರಂದು ಪಾಲಿಕೆ ಕಂದಾಯ ಅಧಿಕಾರಿಗಳು ರಾಕ್‌ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದಾರೆ.

Advertisements

2011 ರಿಂದ 2022-23 ರವರೆಗೆ ರಾಕ್ ಲೈನ್ ಮಾಲ್‌ನಿಂದ ತೆರಿಗೆ ಬಾಕಿ ಉಳಿಸಿದಿದೆ. ಬರೋಬ್ಬರಿ ₹11.51 ಕೋಟಿ ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ನೋಟಿಸ್ ನೀಡಿದ್ದರೂ ತೆರಿಗೆಯನ್ನು ಪಾವತಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾಲ್

ಸ್ಥಳದಲ್ಲಿ ವಲಯ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತ ಬಾಲಶೇಖರ್, ದಾಸರಹಳ್ಳಿ ವಲಯ ಅಧಿಕಾರಿ, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್‌ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಎನ್.ಆರ್.ರಮೇಶ್‌ ಅವರು, ”ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿರುವ ರಾಕ್‌ಲೈನ್‌ ಮಾಲ್‌ ಕೇವಲ 48,500 ಚದರ ಅಡಿ ವಿಸ್ತೀರ್ಣ ಇದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮಾಲ್ ಆರು ಮಹಡಿ ಸೇರಿದಂತೆ ಒಟ್ಟಾರೆ, 1,22,743 ಚದರ ಅಡಿ ವಿಸ್ತಾರದಲ್ಲಿದೆ. 2021ರಲ್ಲಿ ಬಿಬಿಎಂಪಿಗೆ ₹8.5 ಕೋಟಿಗೂ ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ” ಎಂದು ಆರೋಪ ಮಾಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X