ಬಜೆಟ್‌ ಅಧಿವೇಶನ | ಸವಳು-ಜವಳು ಭೂಮಿ ಸುಧಾರಣೆಗೆ ಸರ್ಕಾರ ಕ್ರಮ: ಸಚಿವ ಚಲುವರಾಯಸ್ವಾಮಿ

Date:

Advertisements

ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು ಮಣ್ಣಿನ ಸುಧಾರಣೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ಕಾಗವಾಡ ಕ್ಷೇತ್ರದ ಶಾಸಕರಾದ ಬರಮಗೌಡ ಆಲಗೌಡ ಕಾಗೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಈ ಕಾರ್ಯಕ್ರಮದಡಿ ಕಪ್ಪು ಮಣ್ಣಿನ ಪ್ರತಿ ಹೆಕ್ಟೇರ್‌ಗೆ ರೂ.1.25ಲಕ್ಷಗಳು ಹಾಗೂ ಕೆಂಪು ಮಣ್ಣಿನಲ್ಲಿ ರೂ.65000/-ಗಳ ವೆಚ್ಚದಲ್ಲಿ ಅಂತರ ಬಸಿ ಕಾಲುವೆಯನ್ನು ನಿರ್ಮಾಣ ಮಾಡುವುದರ ಮೂಲಕ ಉಪಚರಿಸಲು ಅವಕಾಶವಿದೆ” ಎಂದರು.

“ಒಣ ಭೂಮಿ/ಶುಷ್ಕ ಪ್ರದೇಶಗಳಲ್ಲಿ, ನೀರು ಆವಿಯಾಗುವಿಕೆಯು ಬೀಳುವ ಮಳೆಯ ಪ್ರಮಾಣವನ್ನು ಮೀರಿದ ಸಂದರ್ಭದಲ್ಲಿ ಮಣ್ಣಿನಲ್ಲಿರುವ ಲವಣಗಳು ಮಣ್ಣಿನ ಮೇಲ್ಮೆ/ಬೇರಿನ ಬಳಿ ಸಂಗ್ರಹವಾಗುವುದು, ನೀರಾವರಿಯ ಅತಿಯಾದ ಬಳಕೆ, ನೀರಿನ ಗುಣಮಟ್ಟ ಲವಣಯುಕ್ತವಾಗಿದ್ದರೆ, ಅಸಮರ್ಪಕ ಮತ್ತು ನೀರಿನ ದುರ್ಬಲ ಬಸಿಯುವಿಕೆಯಿಂದ ನಿರಂತರವಾಗಿ ಮಣ್ಣಿನ ಮೇಲ್ಭಾಗ ಮತ್ತು ಕೆಳಭಾಗದ ಮಣ್ಣಿನಲ್ಲಿ (sub surface) ಲವಣ ಶೇಖರಣೆ ಪ್ರಮಾಣವು ಹೆಚ್ಚು ವೇಗವಾಗಿರುತ್ತದೆ” ಎಂದು ಹೇಳಿದರು.

Advertisements

“ಸವಳು-ಜವಳು ಮಣ್ಣಿನಲ್ಲಿ ಸೋಡಿಯಂ ಪ್ರಮಾಣ ಅಧಿಕವಾಗಿರುವುದರಿಂದ ಮಣ್ಣಿನ ಭೌತಿಕ ಗುಣಧರ್ಮಗಳು ಹಾಳಾಗಿರುವುದರಿಂದ ಮಣ್ಣಿನ ಭೌತಿಕ ಗುಣಧರ್ಮಗಳು ಹಾಳಾಗುವುದರ ಜೊತೆಗೆ ನಿಧಾನವಾಗಿ ನೀರಿನ ಬಸಿಯುವಿಕೆ, ಸಾವಯವ ಅಂಶದ ಕೊರತೆಯಿಂದ ಸೂಕ್ಷ್ಮ ಜೀವಿಗಳ ಕುಂಠಿತ ಚಟುವಟಿಕೆ, ಬೆಳೆಗೆ ದೊರೆಯುವ ಸಾರಜನಕದ/ಲಘು ಪೋಷಕಾಂಶಗಳ ಕೊರತೆಯಂತಹ ಸಮಸ್ಯೆಗಳಿಂದಾಗಿ ಸಸ್ಯಗಳ ಬೆಳವಣಿಗೆ ಕುಂಠಿತವಾಗುವುದು. ಇದರಿಂದಾಗಿ ಕಾಲಕ್ರಮೇಣ ಭೂಮಿಯು ವ್ಯವಸಾಯ/ಬೇಸಾಯ ಕೈಗೊಳ್ಳಲು ನಿರುಪಯುಕ್ತವಾಗುವುದು” ಎಂದು ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ಬೆಳಗಾವಿ ಜಿಲ್ಲೆ ಅವಿಭಾಜ್ಯ ಅಥಣಿ (ಕಾಗವಾಡ) ತಾಲ್ಲೂಕಿನಲ್ಲಿ 1151.54 ಹೆಕ್ಟೇರ್ ಸವಳು-ಜವಳು ಕೃಷಿ ಭೂಮಿ ಇದ್ದು, ಹಂತ ಹಂತವಾಗಿ ಮಣ್ಣು ಸುಧಾರಣೆ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ” ಎಂದು ಚಲುವರಾಯಸ್ವಾಮಿ ತಿಳಿಸಿದರು.

“ಕಾಗವಾಡ ತಾಲ್ಲೂಕಿನಲ್ಲಿ ಸವಳು-ಜವಳಾಗಿರುವ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಜಲಾನಯನ ಅಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಸಕಾರಾತ್ಮಕ ಮಣ್ಣಿನ ಸುಧಾರಣೆ ಕಾರ್ಯಕ್ರಮದಡಿ 2016-17ನೇ ಸಾಲಿನಲ್ಲಿ ಕುಸನಾಳ ಗ್ರಾಮದಲ್ಲಿ 100 ಹೆಕ್ಟೇರ್ ಪ್ರದೇಶವನ್ನು ಹಾಗೂ 2020-21ನೇ ಸಾಲಿನಲ್ಲಿ ಜುಗಳ ಗ್ರಾಮದಲ್ಲಿ 154.08 ಹೆಕ್ಟೇರ್, 2022-23ನೇ ಸಾಲಿನಲ್ಲಿ ಕಾಗವಾಡ ಗ್ರಾಮದಲ್ಲಿ 46.94 ಹೆಕ್ಟೇರ್ ಪ್ರದೇಶ ಭೂಮಿಯನ್ನು ಅಭಿವೃಧ್ಧಿಪಡಿಸಲು ಆಯ್ಕೆ ಮಾಡಲಾಗಿದೆ” ಎಂದು ಅವರು ಅಂಕಿ ಅಂಶ ಒದಗಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X