ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಅಕ್ರಮ ವ್ಯವಹಾರದ ಬಗ್ಗೆ ತನಿಖೆ ಆರಂಭಿಸಿದ ED: ವರದಿ

Date:

Advertisements

ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಆರ್‌ಬಿಐ ರದ್ದುಗೊಳಿಸುವ ಆದೇಶ ಹೊರಡಿಸಿದ ಎರಡು ವಾರಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸಲು ಪ್ರಕರಣ ಕೈಗೆತ್ತಿಕೊಂಡಿರುವುದಾಗಿ ವರದಿಯಾಗಿದೆ.

ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಮೂಲಕ ಆಗಿರುವ ಅವ್ಯವಹಾರ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಬಿಸಿ-ಟಿವಿ18 ವರದಿ ಮಾಡಿದೆ.

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದ ಎರಡು ವಾರದ ಬಳಿಕ ಈ ಬೆಳವಣಿಗೆ ನಡೆದಿದೆ. ಆದರೆ ಈ ಬಗ್ಗೆ ಇ ಡಿ ಅಧಿಕಾರಿಗಳಾಗಲೀ, ಪೇಟಿಎಂ ಆಗಲಿ ಹೇಳಿಕೆ ನೀಡಿಲ್ಲ ಎಂದು ವರದಿ ತಿಳಿಸಿದೆ.

Advertisements

ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು
ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ಆದೇಶ ಹೊರಡಿಸಿತ್ತು. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶದಲ್ಲಿ ತಿಳಿಸಿತ್ತು.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಆರ್‌ಬಿಐ, “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರಿದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಹಾಗೂ ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರವೇ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಆರ್‌ಬಿಐ ಸ್ಪಷ್ಟಪಡಿಸಿತ್ತು.

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಈ ಆದೇಶದ ಬೆನ್ನಲ್ಲೇ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ನಿರ್ದೇಶಕ ಮಂಜು ಅಗರ್ವಾಲ್ ರಾಜೀನಾಮೆ ನೀಡಿದ್ದರು.

ಇ.ಡಿ ಮೌನ ಪ್ರಶ್ನಿಸಿದ್ದ ಕಾಂಗ್ರೆಸ್

ಪೇಟಿಎಂ ಪೇಮೆಂಟ್ ಬ್ಯಾಂಕ್‌ ಸೇವೆಗಳನ್ನು ಆರ್‌ಬಿಐ ರದ್ದುಗೊಳಿಸಿದ್ದ ನಂತರ ಜಾರಿ ನಿರ್ದೇಶನಾಲಯದ ಮೌನದ ಬಗ್ಗೆ ವಿಪಕ್ಷ ಕಾಂಗ್ರೆಸ್ ಪ್ರಶ್ನಿಸಿತ್ತು.

ಇದನ್ನು ಓದಿದ್ದೀರಾ? ಪೇಟಿಎಂ ಪಾವತಿ ಬ್ಯಾಂಕ್ | ಅಕ್ರಮ ಹಣ ವ್ಯವಹಾರದ ಬಗ್ಗೆ ಇ.ಡಿ ತನಿಖೆಯ ಅಗತ್ಯವೇಕಿದೆ?

ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ, “ಈ ಹಗರಣದ ಬಗ್ಗೆ ಕೇಂದ್ರದ ನಿಲುವು ಏನು? ಕಳೆದ ಏಳು ವರ್ಷಗಳಿಂದ ತಪ್ಪು ನಡೆಯುತ್ತಿದ್ದರೂ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಮೇಲೆ ಏಕೆ ಕ್ರಮ ಜರುಗಿಸಿಲ್ಲ? ಪೇಟಿಎಂ ಪೇಮೆಂಟ್‌ ಬ್ಯಾಂಕಿನ ಮುಖ್ಯಸ್ಥ ಪ್ರಧಾನಿ ಮೋದಿ ಭಕ್ತ. ಅವರೊಂದಿಗೆ ಸೆಲ್ಫಿ ಪಡೆದಿದ್ದಾರೆ. ಪ್ರಧಾನಿಯಿಂದ ಅನುಕೂಲ ಪಡೆಯಲು ಜಾಹೀರಾತುಗಳನ್ನು ಪ್ರಕಟಿಸಿದ್ದಾರೆ” ಎಂದು ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X