ಸಿಬಿಐ ವಿಚಾರಣೆ ಗೌರವಿಸುತ್ತೇನೆ ಎಂದ ಅರವಿಂದ್‌ ಕೇಜ್ರಿವಾಲ್

Date:

Advertisements
  • ಪ್ರಧಾನಿ ಮೋದಿ ಭ್ರಷ್ಟಾಚಾರದ ಅಪರಾವತಾರ ಅರವಿಂದ್‌ ಕೇಜ್ರಿವಾಲ್‌
  • ಕೇಜ್ರಿವಾಲ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬೆಂಬಲ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ನೀಡಿರುವ ಸಮನ್ಸ್‌ಗೆ ಗೌರವ ನೀಡುತ್ತೇನೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಶನಿವಾರ (ಏಪ್ರಿಲ್‌ 15) ಹೇಳಿದ್ದಾರೆ.

ಪ್ರಕರಣದಲ್ಲಿ ವಿಚಾರಣೆ ನಡೆಸಲು ಸಿಬಿಐ ಹಿಂದಿನ ದಿನ ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಿತ್ತು. ಸಿಬಿಐ, ಜಾರಿ ನಿರ್ದೇಶನಾಲಯ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದರು.

ಈ ಕುರಿತು ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರ ಜೊತೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌, ಎಎಪಿಯ ಸಂಸತ್‌ ಸದಸ್ಯರು ಮತ್ತು ದೆಹಲಿ ಸರ್ಕಾರದ ಇತರ ನಾಯಕರು ಹಾಜರಿದ್ದರು.

Advertisements

“ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಅಪರಾವತಾರ. ಆದರೆ ಭ್ರಷ್ಟಾಚಾರದಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ನಾಯಕರನ್ನು ಗುರಿಯಾಗಿಸಲಾಗುತ್ತಿದೆ” ಎಂದು ಕಿಡಿಕಾರಿದರು.

“ಕೇಜ್ರಿವಾಲ್‌ ಭ್ರಷ್ಟನಾದರೆ ಈ ಜಗತ್ತಿನಲ್ಲಿ ಯಾರೂ ಸಭ್ಯರಲ್ಲ ಎಂದು ಪ್ರಧಾನಿ ಮೋದಿಗೆ ಹೇಳುತ್ತೇನೆ. ಸಿಬಿಐ ನನ್ನನ್ನು ನಾಳೆ ವಿಚಾರಣೆಗೆ ಕರೆದಿದೆ, ಹೋಗುತ್ತೇನೆ. ನಾನು ಕಳ್ಳನಾದರೆ ಈ ಜಗತ್ತಿನಲ್ಲಿ ಯಾರೂ ಪ್ರಾಮಾಣಿಕರಲ್ಲ ಎಂದು ಪುನರುಚ್ಛರಿಸುತ್ತೇನೆ” ಎಂದು ಕೇಜ್ರಿವಾಲ್‌ ಸುದ್ದಿಗಾರರಿಗೆ ತಿಳಿಸಿದರು.

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬೆಂಬಲಿಸಿದ ಮೊದಲ ನಾಯಕ. ಇದನ್ನು ಕೇಜ್ರಿವಾಲ್‌ ಉಲ್ಲೇಖಿಸಿದರು.

ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಸಿಬಿಐ ಶುಕ್ರವಾರ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ನೀಡಿತ್ತು. ಈ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಜ್ರಿವಾಲ್‌ ಅವರಿಗೆ ಕರೆ ಮಾಡಿ ಮಾತನಾಡಿದ್ದರು.

ಈ ಸುದ್ದಿ ಓದಿದ್ದಿರಾ? ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ: ಮುಂಬೈ ನ್ಯಾಯಾಲಯ

ಮಲ್ಲಿಕಾರ್ಜುನ ಖರ್ಗೆ ಅವರು ಕೇಜ್ರಿವಾಲ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧದ ಪ್ರತಿಪಕ್ಷಗಳ ಹೋರಾಟದಲ್ಲಿ ಎಎಪಿಯೂ ಮುಖ್ಯಪಾತ್ರ ವಹಿಸಿದೆ.

ನಿತೀಶ್‌ ಕುಮಾರ್‌ ದೆಹಲಿಗೆ ತೆರಳಿದಾಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹಾಗೂ ಕೇಜ್ರಿವಾಲ್‌ ಸಹ ಕಾಂಗ್ರೆಸ್‌ ಜೊತೆಗಿನ ಭೇಟಿಯಲ್ಲಿ ಜೊತೆಗಿದ್ದರು.

ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಈಗಾಗಲೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನ ಬಲ ಪ್ರಯೋಗಿಸುವ ಬಗ್ಗೆ ಚರ್ಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X