ಬಜೆಟ್‌ ಅಧಿವೇಶನ | ನಿಮ್ಮ ಗೂಂಡಾಗಿರಿಗೆಲ್ಲ ಹೆದರಲ್ಲ; ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು

Date:

Advertisements

ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, ಏಳು ಕೋಟಿ ಜನರು ನೋಡ್ತಾ ಇದ್ದಾರೆ. ಜನ ಇವರಿಗೆ ಛೀ.. ಥೂ…ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲೇ ಗುಡುಗಿದರು.

ವಿಧಾನ ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಉತ್ತರಿಸುವಾಗ ಸಿದ್ದರಾಮಯ್ಯ ಗೂಂಡಾಗಿರಿ ಪದವನ್ನು ಬಳಕೆ ಮಾಡಿದ್ದಾರೆ ಎಂದು ಆಕ್ಷೇಪಿಸಿ, ಬಿಜೆಪಿ ಸದಸ್ಯರು ಗದ್ದಲ ಮಾಡಿದಾಗ ಸಿಎಂ ಗದರಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಕೋಟ ಶ್ರೀನಿವಾಸ ಪೂಜಾರಿ, “ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು ನೀವಾ, ನಾವಾ? ನಮಗೆ ಗೂಂಡಾಗಿರಿ ಅಂತೀರಲ್ಲ, ಆಗ ತೊಡೆ ತಟ್ಟಿದ್ದು ಯಾರು? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ” ಎಂದು ತಿರುಗೇಟು ನೀಡಿದರು.

Advertisements

ಸಿದ್ದರಾಮಯ್ಯ ಮರು ಉತ್ತರಿಸಿ, “ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ, ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ, ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದವರದ್ದೇನು ಮಾತು” ಎಂದರು.

“ನಿರ್ಮಲಾ ಸೀತಾರಾಮನ್​ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ. ಅವರೇ ಬಜೆಟ್ ಒಪ್ಪಿಕೊಂಡಿದ್ದ 5300 ಕೋಟಿ ರೂ. ಬಿಡುಗಡೆ ಮಾಡಿಲ್ಲ. ಆದರೆ ನಾವು 1 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ” ಎಂದು ಸಿದ್ದರಾಮಯ್ಯ ಹೇಳಿದರು.

“ಯೋಜನೆಗಳ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಹಣ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ” ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಿಎಂ ವಿಷಾಧಕ್ಕೆ ವಿಪಕ್ಷಗಳ ಬಿಗಿ ಪಟ್ಟು

ಸಿಎಂ ಗೂಂಡಾ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರಿಂದ ಸಭಾತ್ಯಾಗ ಮಾಡಿದರು. ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಲೇಬೇಕು ಎಂದು ವಿಪಕ್ಷ ಬಿಗಿ ಪಟ್ಟು ಹಿಡಿಯಿತು. ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಸದಸ್ಯರ ಮನವೊಲಿಕೆ ಮಾಡಲು ಪ್ರಯತ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X