ಸುಪ್ರೀಂ ತೀರ್ಪು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಮಾಜಿ ಕೇಂದ್ರ ಚುನಾವಣಾ ಆಯುಕ್ತ ಖುರೇಷಿ

Date:

Advertisements

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ ವೈ ಖುರೇಷಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವದ ಮೇಲೆ ಜನರಿಗಿರುವ ನಂಬಿಕೆಯನ್ನು ಉಳಿಸಿದೆ. ಈ ರೀತಿ ನಡೆದಿರುವುದು ದೊಡ್ಡ ವಿಷಯವಾಗಿದೆ.ಕಳೆದ ಐದರಿಂದ ಏಳು ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ದೊಡ್ಡ ಐತಿಹಾಸಿಕ ತೀರ್ಪಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ” ಎಂದು ಹೇಳಿದರು.

“ ಕಳೆದ ಹಲವು ವರ್ಷಗಳಿಂದ ಇದರ ಬಗ್ಗೆ ನಮಗೆ ಸಮಸ್ಯೆಯುಂಟಾಗಿತ್ತು. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಎಲ್ಲರೂ ಇದನ್ನು ವಿರೋಧಿಸಿದ್ದರು. ನಾನು ಈ ಬಗ್ಗೆ ಹಲವು ಲೇಖನಗಳನ್ನು ಬರೆದಿದ್ದೆ, ಮಾಧ್ಯಮಗಳಲ್ಲಿ ಹಲವು ಬಾರಿ ಮಾತನಾಡಿದ್ದೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗಳನ್ನು ತೀರ್ಪಿನ ಮೂಲಕ ನಿಭಾಯಿಸಲಾಗಿದೆ” ಎಂದು ಖುರೇಷಿ ತಿಳಿಸಿದ್ದಾರೆ.

Advertisements

ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರದ ಮಾಜಿ ಚುನಾವಣಾ ಆಯುಕ್ತರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕೂಡ ಪ್ರಕಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದೆ. ತೀರ್ಪಿನಿಂದ ಸಂತಸವುಂಟಾಗಿದೆ. ಬ್ಯಾಕಿಂಗ್‌ ವ್ಯವಸ್ಥೆಯ ಮೂಲಕ ಕೊಡುಗೆಗಳನ್ನು ಪಡೆಯುವ ಕ್ರಮ ಸರಿಯಿದೆ. ಆದರೆ ನಮ್ಮ ಕಾಳಜಿಯಿರುವುದು ನೀಡಿರುವ ಕೊಡುಗೆಯನ್ನು ರಾಜಕೀಯ ಪಕ್ಷಗಳು ಏಕೆ ಗುಟ್ಟಾಗಿಡುತ್ತವೆ ಎಂಬುದು? ಎಂದು ಎಸ್‌ ವೈ ಖುರೇಷಿ ಪ್ರಶ್ನಿಸಿದ್ದಾರೆ.

“ದಾನ ನೀಡುವವನು ಗುಟ್ಟಾಗಿ ಇಡಬೇಕೆಂದು ಬಯಸಿದರೆ ಸಾರ್ವಜನಿಕರು ಪಾರದರ್ಶಕತೆ ಬಯಸುತ್ತಾರೆ. ಆದ್ದರಿಂದ ದಾನಿ ಏಕೆ ಗುಟ್ಟಾಗಿ ಇಡಬೇಕು? ಏಕೆಂದರೆ ಕೊಡುವ ಮತ್ತು ಕೊಳ್ಳುವುದರಲ್ಲಿ ಏನೋ ಮುಚ್ಚಿಡುತ್ತಿದ್ದಾನೆ. ಪುನಃ ಅನುಕೂಲಗಳನ್ನು ವಾಪಸ್‌ ಪಡೆಯುತ್ತಿದ್ದಾನೆ ಪರವಾನಗಿಗಳು, ಗುತ್ತಿಗೆಗಳು,  ವಿದೇಶಿಗಳಲ್ಲಿ ಭೂಮಿ ಕೊಳ್ಳಲು ಸಾಲಗಳು. ಹಾಗಿದ್ದರೆ ಅವರು ಏಕೆ ಮುಚ್ಚಿಡಲು ಬಯಸುತ್ತಾರೆ? ಎಂದು ಮಾಜಿ ಚುನಾವಣಾ ಆಯುಕ್ತರು ಪ್ರಶ್ನಿಸಿದ್ದಾರೆ.

“ಸರ್ಕಾರ ಕೂಡ ದಾನಿಗಳನ್ನು ಗುಟ್ಟಾಗಿಡಲು ಪ್ರಯತ್ನಿಸುತ್ತಿದೆ. ಇದೇ ದಾನಿಗಳು ಕಳೆದ 70 ವರ್ಷಗಳಿಂದ ದಾನ ಮಾಡುತ್ತಿದ್ದಾರೆ. ಇದ್ದಕ್ಕಿದ್ದಂತೆ ಗೌಪ್ಯತೆಯ ಅವಶ್ಯಕತೆ ಏನಿದೆ. ಆದ ಕಾರಣ ಈಗ ಅದನ್ನು ದೂರ ಮಾಡಲಾಗಿದೆ. ನಮ್ಮ ಪ್ರಜಾಪ್ರಭುತ್ವ ಮತ್ತೊಮ್ಮೆ ಆರೋಗ್ಯಕರವಾಗಿದೆ ಎಂದು ನನಗನಿಸುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X