ಜಗದೀಶ್ ಶೆಟ್ಟರ್‌ಗೆ ಕರೆ ಮಾಡಿ ಗಾಳ ಹಾಕಿದ್ರಾ ಸುರ್ಜೇವಾಲಾ?

Date:

Advertisements
  • ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
  • ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ

ಶಾಸಕ ಸ್ಥಾನದಿಂದ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ತನ್ನತ್ತ ಸೆಳೆದುಕೊಳ್ಳಲು ಕಾಂಗ್ರೆಸ್‌ ತೆರೆ ಮರೆಯಲ್ಲಿ ಪ್ರಯತ್ನ ನಡೆಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಅವರಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ.

“ನೀವು ಕಾಂಗ್ರೆಸ್ಸಿಗೆ ಬನ್ನಿ. ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ” ಎಂದು ಸುರ್ಜೇವಾಲ ಅವರು ಶೆಟ್ಟರ್‌ ಅವರಿಗೆ ಕರೆ ಮೂಲಕ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Advertisements

ಸುರ್ಜೇವಾಲ ನೀಡಿರುವ ಆಫರ್‌ ಬಗ್ಗೆ ಶೆಟ್ಟರ್ ಪ್ರತಿಕ್ರಿಯಿಸಿ, “ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಾಗಿಲ್ಲ. ನಮ್ಮ ಕ್ಷೇತ್ರಕ್ಕೆ ಸೂಕ್ತ ಅನುದಾನ ಕಲ್ಪಿಸಿದರೆ ಸಾಕು” ಎನ್ನುವ ಇಂಗಿತ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜಗದೀಶ್‌ ಶೆಟ್ಟರ್‌ ಅವರನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕೆರೆ ತರಲು ಡಿ ಕೆ ಶಿವಕುಮಾರ್‌ ಹೆಸರಲ್ಲಿ ಎರಡು ಹೆಲಿಕಾಪ್ಟರ್‌ ಬುಕ್‌ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸಿ ಕಾಂಗ್ರೆಸ್‌ ಸೇರುವುದು ಖಚಿತವಾದಲ್ಲಿ ಮಧ್ಯಾಹ್ನ ನಂತರ ಬೆಂಗಳೂರಿಗೆ ಶೆಟ್ಟರ್‌ ಆಗಮಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೋಲಾರಕ್ಕೆ ಆಗಮಿಸಿದ್ದು, ಶೆಟ್ಟರ್‌ ಅವರು ಕಾಂಗ್ರೆಸ್‌ ಆಯ್ಕೆ ಮಾಡಿಕೊಂಡಲ್ಲಿ ಈ ಎಲ್ಲ ನಾಯಕರ ಸಮ್ಮುಖದಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್ಸಿಗೆ ಬರುತ್ತಾರೆ ಎಂದರೆ ನಾವು ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ಜಗದೀಶ್‌ ಶೆಟ್ಟರ್‌ ಒಬ್ಬ ಪ್ರಾಮಾಣಿಕ ರಾಜಕಾರಣಿ. ಕಪ್ಪು ಚುಕ್ಕೆ ಇಲ್ಲದೇ ಮುಖ್ಯಮಂತ್ರಿ ಸ್ಥಾನ ನಿಭಾಯಿಸಿದ್ದಾರೆ. ಅವರು ಕಾಂಗ್ರೆಸ್ಸಿಗೆ ಬರುತ್ತಾರೆ ಎಂದರೆ ಸೂಕ್ತ ಸ್ಥಾನಮಾನ ನೀಡಿ ಬರಮಾಡಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲ ಆಯ್ಕೆಗಳು ತೆರೆದಿವೆ. ಕಾಂಗ್ರೆಸ್ ನವರು ತಮ್ಮ ಪ್ರತಿನಿಧಿ ಕಳಿಸಿದ್ದಾರೆ.ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಜಗದೀಶ್‌ ಶೆಟ್ಟರ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X