ಮಂಗಳೂರು ಘಟನೆ | ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್: ಆರ್.ಅಶೋಕ್ ಆರೋಪ

Date:

Advertisements

ಮಂಗಳೂರಿನ ಜೆರೋಸಾ ಶಾಲೆಯಲ್ಲಿನ ಘಟನೆಗೆ ಸಂಬಂಧಿಸಿ ಸರ್ಕಾರದ ಒತ್ತಡದಿಂದ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಹೊತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭಾ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು, ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ, ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ, ಬಳೆ ತೊಡುವುದರಲ್ಲಿ ಪವಿತ್ರತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು, ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ” ಎಂದು ಅಶೋಕ್ ವಿವರಿಸಿದರು.

Advertisements

“ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ” ಎಂದು ದೂರಿದ್ದಾರೆ.

“ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ” ಎಂದು ಆರ್ ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಹಿಂದು ಭಾವನೆಗೆ ಶಿಕ್ಷಕಿ ಧಕ್ಕೆ ತಂದಿಲ್ಲ; ಬಿಜೆಪಿ ಶಾಸಕನ ಒತ್ತಡದಿಂದ ಅಮಾನತು: ಜೆರೋಸಾ ಶಾಲೆ ಮುಖ್ಯಶಿಕ್ಷಕಿ

“ಕರ್ನಾಟಕವು ಈಗ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭಾ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇವರೆಲ್ಲರಿಗೂ ಒಂದೇ ಅಂಟು ರೋಗ,,, ದಿಲ್ಲಿ ಬಾದಶಾನನ್ನು ಮೆಚ್ಚಿಸಲು ರಾಜ್ಯವನ್ನು ಕೋಮುದಳ್ಳುರಿಗೆ ತಳ್ಳಲೂ ಹಿಂದೇಟು ಹಾಕಲಾರರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X