ಬೆಂಗಳೂರು | ಅಶ್ಲೀಲ ಫೋಟೋ ತೋರಿಸಿ ಬೆದರಿಸಿ ಹಣ ಸುಲಿಗೆ: ಎಫ್ಐಆರ್ ದಾಖಲು

Date:

Advertisements

ಜೈಲಿನಲ್ಲಿರುವ ರೌಡಿಶೀಟರ್‌ವೊಬ್ಬ ಪರಿಚಿತ ಮಹಿಳೆಯ ಫೋಟೋಗಳನ್ನು ಮಾರ್ಫ್ ಮಾಡಿ ಬೆದರಿಕೆ ಹಾಕಿ ಆಕೆಯ ತಾಯಿಯಿಂದ ಹಣ ಪೀಕುತ್ತಿದ್ದನು. ಸದ್ಯ ಆರೋಪಿಯ ವಿರುದ್ಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮನೋಜ್ ಅಲಿಯಾಸ್ ಕೆಂಚ ಜೈಲಿನಲ್ಲಿರುವ ರೌಡಿ ಶೀಟರ್. ​ಪರಪ್ಪನ ಕಾರಾಗೃಹದಲ್ಲಿರುವ ರೌಡಿ ಶೀಟರ್‌ ತನ್ನ ಮಗಳ ಮಾರ್ಫ್ ಮಾಡಿದ ಚಿತ್ರಗಳು ಮತ್ತು ವೀಡಿಯೊಗಳನ್ನು ಹಾಕಿ ಬ್ಲಾಕ್ ಮೇಲ್ ಮಾಡಿ ಹಣ ಪೀಕುತ್ತಿದ್ದಾನೆ ಎಂದು ಆರೋಪಿಸಿ 43 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

“ಹಣ ನೀಡದಿದ್ದರೆ ಚಿತ್ರಗಳು ಮತ್ತು ವೀಡಿಯೊಗಳನ್ನು ತನ್ನ ಅಳಿಯನಿಗೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

Advertisements

“ರೌಡಿಶೀಟರ್‌ಗೆ ಸಂತ್ರಸ್ತೆ ತಾಯಿ ಈ ಹಿಂದೆ ₹40 ಸಾವಿರ ಹಣ ನೀಡಿದ್ದರು ಎನ್ನಲಾಗಿದೆ. ಮತ್ತೆ ₹5 ಲಕ್ಷ ನೀಡಲು ಹಣದ ವ್ಯವಸ್ಥೆ ಮಾಡುವಂತೆ ದೂರುದಾರರಿಗೆ ಬೆದರಿಕೆ ಹಾಕುತ್ತಿದ್ದಾರೆ. ಹಣ ವಸೂಲಿ ಮಾಡಲು ಜೈಲಿನಿಂದ ವಾಟ್ಸ್‌ಆ್ಯಪ್ ಕರೆ ಮಾಡಿದ್ದನು” ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದು, ಮನು, ಆತನ ಸಹಚರ ಕಾರ್ತಿಕ್ ಹಾಗೂ ಇತರರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಮನು ಮತ್ತೊಂದು ಪ್ರಕರಣದಲ್ಲಿ ಜೈಲು ಪಾಲಾಗಿದ್ದು, 2023ರ ಆಗಸ್ಟ್‌ನಿಂದ ದೂರುದಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಫೆಬ್ರವರಿ 9 ರಂದು ದೂರುದಾರರಿಗೆ ಕಾರ್ತಿಕ್ ಕರೆ ಮಾಡಿ ₹5 ಲಕ್ಷ ಹಣ ನೀಡಲು ಕೇಳಿದ್ದಾರೆ. ಆಕೆ ಹಣ ನೀಡಲು ನಿರಾಕರಿಸಿದಾಗ, ಮನು ಮತ್ತೆ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಫೆ.15 ರಿಂದ ಪ್ರಾಯೋಗಿಕ ಚಾಲನೆ

ದೂರುದಾರ ಮಹಿಳೆಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಆರೋಪಿ ತನ್ನ ನಂಬರ್​ನಿಂದ ವಾಟ್ಸ್​ಆ್ಯಪ್ ಮೂಲಕ ಆಕೆಯ ವಿವಾಹಿತ ಮಗಳ ಅಶ್ಲೀಲ ಫೋಟೊ ಕಳುಹಿಸಿದ್ದನು. ತಕ್ಷಣ ದೂರುದಾರ ಮಹಿಳೆ ಆ ನಂಬರಿಗೆ ಕರೆ ಮಾಡಿದಾಗ ”ನಿನ್ನ ಮಗಳ ಇಂತಹ ನಗ್ನ ಫೋಟೋಗಳು ನನ್ನ ಬಳಿ ಇವೆ. ಅವುಗಳನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ. ಕಳುಹಿಸಬಾರದೆಂದರೆ ಹಣ ಕೊಡಬೇಕು” ಎಂದು ಆರೋಪಿ ಬೆದರಿಕೆ ಒಡ್ಡಿದ್ದಾನೆ. ಇದರಿಂದ ಭಯಗೊಂಡ ಮಹಿಳೆ ಆತ ಹೇಳಿದಂತೆ ಎರಡು ಖಾತೆಗಳಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X