ಕಲಬುರಗಿ | ಕಾಮಗಾರಿ ಅಪೂರ್ಣ; ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

Date:

Advertisements

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ (ಎಐಎಡಬ್ಲೂಯು) ಒತ್ತಾಯಿಸಿದೆ. ಸಂಘಟನೆಯ ಮುಖಂಡರು ಕಲಬುರಗಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಕಾಶಿನಾಥ ಬಂಡಿ, “ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮುಖ್ಯ ರಸ್ತೆ ಕಾಮಗಾರಿ ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದೆ, 12 ತಿಂಗಳ ಹಿಂದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡುತ್ತೇವೆಂದು ಹಿಟಾಚಿಗಳು ತಂದು ಬೇಕಾಬಿಟ್ಟಿಯಾಗಿ ತಗ್ಗು-ಗುಂಡಿಗಳನ್ನು ತೋಡಿ ಹಾಕಿ, ಪೂರ್ಣಪ್ರಮಾಣದ ಕಾಮಗಾರಿ ಮಾಡದೇ ಕಾಟಾಚಾರಕ್ಕೆ ಕೇದರಿ ಇಂದಿಗೆ ವರ್ಷ ದಾಟಿದೆ” ಎಂದರು.

ಈ ರಸ್ತೆಯ ಮೇಲೆ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತವೆ. ದಿನ ನಿತ್ಯ ಇಲ್ಲಿ ರಸ್ತೆ ಅಪಘಾತಗಳು ಸಾಮಾನ್ಯ ಎನ್ನುವಂತಾಗಿವೆ. ರಸ್ತೆ ಸಮೀಪ ವಾಸಿಸುವ ಕುಟುಂಬಗಳ ಮನೆಗಳಲ್ಲಿ ಧೂಳು ಹಾರುತ್ತಿದ್ದು, ಜನ ಅನಾರೋಗ್ಯಕ್ಕಿಡಾಗುತ್ತಿದ್ದಾರೆ. ಸುಮಾರು ಸಲ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಏನು ಪ್ರಯೋಜವಾಗಿರುವುದಿಲ್ಲ. ಸಂಬಂಧಿಸಿದ ಗುತ್ತಿಗೆದಾರ ಈ ಕಡೆ ಕಣ್ಣು ಹಾಕುತ್ತಿಲ್ಲ. ಇಂತಹ ಬೇಜಬ್ಬಾರಿ ಗುತ್ತಿಗೇದಾರನ ಪರವಾನಿಗೆ ಕಪ್ಪು-ಪಟ್ಟಿಗೆ ಹಾಕಿ ಕಾನೂನಿನ ಕ್ರಮ ಜರುಗಿಸಬೇಕು, ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡುಬೇಕು ಎಂದು ಆಗ್ರಹಿಸಿದರು.

Advertisements

ಈ ಕೂಡಲೆ ಸಂಬಂಧಿಸಿದ ಗುತ್ತಿಗೇದಾರ ಹಾಗೂ ಅಧಿಕಾರಿಗಳ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳದೇ ಹೋದರೆ. ಮುಂಬರುವ ದಿನಗಳಲ್ಲಿ ಇನ್ನು ಉಗ್ರವಾಗಿ ಹೋರಾಟ ಮಾಡುವುದಾಗಿ, ಈ ರಸ್ತಾರೋಖೋ ಮೂಲಕ ಆಗ್ರಹಿಸುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗುರುನಂದೇಶ ಕೋಣಿನ್ ಅಧ್ಯಕ್ಷರು, ಕಾಶಿನಾಥ ಬಂಡಿ ಕಾರ್ಯದರ್ಶಿ, ಮಲ್ಲಮ್ಮ ಮಗಿ ಜಿಲ್ಲಾ ಕಾರ್ಯದರ್ಶಿ, ಸಂಗಮೇಶ ತಾಂಡೂರ, ಸಂತೋಷ ಪಾಟೀಲ್, ಅಬ್ಬಾಸಲಿ ಮಲ್ಲು ಚಿಂತಕುಂಟಾ, ಚಂದ್ರಶೆಟ್ಟಿ ಡೊಣ್ಣೂರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X