ಏಷ್ಯಾ ಲಯನ್ಸ್ ಮಡಿಲಿಗೆ ಲೆಜೆಂಡ್ಸ್ ಕ್ರಿಕೆಟ್‌ ಲೀಗ್ ಕಿರೀಟ

Date:

Advertisements

ಉಪುಲ್‌ ತರಂಗ ಮತ್ತು ತಿಲಕರತ್ನೆ ದಿಲ್ಶನ್ ಶತಕದ ಜೊತೆಯಾಟದ ನೆರವಿನಿಂದ ಏಷ್ಯಾ ಲಯನ್ಸ್ ತಂಡ, ಲೆಜೆಂಡ್ಸ್ ಕ್ರಿಕೆಟ್‌ ಲೀಗ್ ಟೂರ್ನಿಯ ಚಾಂಪಿಯನ್‌ ಪಟ್ಟವನ್ನಲಂಕರಿಸಿದೆ. ದೋಹಾದ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಶಾಹೀದ್​ ಅಫ್ರಿದಿ ಸಾರಥ್ಯದ ಲಯನ್ಸ್‌ ತಂಡ, ವರ್ಲ್ಡ್ ಜೈಂಟ್ಸ್ ವಿರುದ್ಧ 7 ವಿಕೆಟ್‌ಗಳ ಜಯಭೇರಿ ಭಾರಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಶೇನ್‌ ವಾಟ್ಸನ್‌ ನಾಯಕತ್ವದ ವರ್ಲ್ಡ್ ಜೈಂಟ್ಸ್, ಜ್ಯಾಕ್‌ ಕಾಲಿಸ್‌ ಗಳಿಸಿದ ಅಬ್ಬರದ ಅರ್ಧಶತಕದ (78 ರನ್‌, 54 ಎಸೆತ, 4×5, 6×3) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ 147 ರನ್‌ಗಳಿಸಿತ್ತು. ಚೇಸಿಂಗ್‌ ವೇಳೆ ಏಷ್ಯಾ ಲಯನ್ಸ್ ಆರಂಭಿಕರಾದ ಉಪುಲ್‌ ತರಂಗ (57 ರನ್‌, 28 ಎಸೆತ) ಮತ್ತು ತಿಲಕರತ್ನೆ ದಿಲ್ಶನ್ (58 ರನ್‌, 42 ಎಸೆತ) ಶತಕದ ಜೊತೆಯಾಟದ (115 ರನ್)‌ ನೆರವಿನಿಂದ 16.1 ಓವರ್‌ಗಳಲ್ಲಿ 3 ವಿಕೆಟ್‌  ನಷ್ಟದಲ್ಲಿ ಇನ್ನೂ 23 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿತು.

ವರ್ಲ್ಡ್ ಜೈಂಟ್ಸ್ ತಂಡದ ಬೌಲಿಂಗ್‌ ವಿಭಾಗವನ್ನು ನಿರ್ದಯವಾಗಿ ದಂಡಿಸಿದ ತರಂಗ ಮತ್ತು ದಿಲ್ಶನ್ ಜೋಡಿ, ಕೇವಲ 9.6 ಓವರ್‌ಗಳಲ್ಲಿ ತಂಡದ ಮೊತ್ತವನ್ನು 115 ರನ್‌ಗಳಿಗೆ ತಲುಪಿಸಿತ್ತು. ದಿಲ್ಶಾನ್ 42 ಎಸೆತಗಳಲ್ಲಿ ಎಂಟು ಬೌಂಡರಿಗಳೊಂದಿಗೆ 58 ರನ್ ಗಳಿಸಿದರೆ, ತರಂಗ 28 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 57 ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಎಲಿಮಿನೇಟರ್‌ ಪಂದ್ಯದಲ್ಲಿ ʻಇಂಡಿಯಾ ಮಹಾರಾಜಾಸ್‌ʼ ವಿರುದ್ಧದ  ಗೆಲುವಿನಲ್ಲೂ ಉಪುಲ್‌ ತರಂಗ ನಿರ್ಣಾಯಕ ಪಾತ್ರ ವಹಿಸಿದ್ದರು.

Advertisements
bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X