ಧಾರವಾಡ | ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರೂ ಹೆಚ್ಚಾಗಿ ಪಾಲ್ಗೊಂಡಿದ್ದರು: ಸಚಿವ ಸಂತೋಷ್ ಲಾಡ್

Date:

Advertisements

ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್ ಆಯೋಜಿಸಿದ್ದ ಮುಸ್ಲಿಂ ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. “ನಮ್ಮ ಭಾರತ ದೇಶದಲ್ಲಿ ಜಾತಿ ಮತ ಬೇಧವಿಲ್ಲದೆ ಎಲ್ಲರೂ ಒಟ್ಟಾಗಿ ದೇಶ ಕಟ್ಟುವ ಕೆಲಸಕ್ಕೆ ಮುಸಲ್ಮಾನರು ಮುಂದೆ ಬರಬೇಕು. ಎಲ್ಲಿಯವರೆಗೆ ಹಿಂದೂ ಮುಸ್ಲಿಂ ಸಮಾಜದವರು ಅಣ್ಣ ತಮ್ಮಂದಿರಾಗಿ ಇರುತ್ತಾರೋ ಅಲ್ಲಿಯವರೆಗೆ ಈ ದೇಶ ಒಡೆಯಲು ಸಾಧ್ಯವಿಲ್ಲ” ಎಂದರು

ನಮ್ಮ ದೇಶ ಭಾರತಕ್ಕೆ ಗಂಡಾಂತರ ಎದುರಾಗಿದೆ ಜಾತಿ ಮತ್ತು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುವುದನ್ನು ನಿಲ್ಲಿಸಲು ನಾವು ನೀವೆಲ್ಲರೂ ಜವಾಬ್ದಾರರು ಎಂದು ಹೇಳಿದರು.

Advertisements

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸಂತೋಷ್ ಲಾಡ್ ಪೌಂಡೇಶನ್  ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ತಿಳಿಸಿದರು.

ಅಂಜುಮನ್ ಕಾರ್ಯದರ್ಶಿ ಖಾದೀರ್ ನಜೀಮ ಸರಗಿರೋ ಅವರು ಪರಿಚಯಿಸಿದರು. ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ ಚಾನೆಲ್‌ನ ಸಂಪಾದಕ ಎಂ.ಕೆ.ನದಾಫ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವಾರು ಮುಸ್ಲಿಂರನ್ನು ಸಂತೋಷ್ ಲಾಡ್ ಸನ್ಮಾನಿಸಿದರು. ಡಾ.ಖೈರುದ್ದೀನ ಶೇಖ ಕಾರ್ಯಕ್ರಮ ನಿರೂಪಿಸಿದರು, ಸಾವಿರಾರು ಮುಸಲ್ಮಾನರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X