ಬೆಂಗಳೂರು | ಹಲ್ಲೆಗೊಳಗಾದ ಕೇರಳದ ಇಬ್ಬರು ಮಾದಕ ವಸ್ತು ಮಾರಾಟಗಾರರು

Date:

Advertisements

ಬೆಂಗಳೂರಿನ ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಬಳಿ ಭಾನುವಾರ ಆರು ಮಂದಿಯ ತಂಡದಿಂದ ಥಳಿತಕ್ಕೊಳಗಾಗಿದ್ದ ಕೇರಳದ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ದಂಧೆಕೋರರು ಎಂದು ತಿಳಿದುಬಂದಿದೆ.

ಎಸ್ ಶಿಜು (25) ಮತ್ತು ತ್ರಿಶೂರ್‌ನ ಡೊನಾಲ್ ವಿಲ್ಸನ್ (27) ಈ ಇಬ್ಬರು ಮಾದಕ ವಸ್ತು ದಂಧೆಕೋರರು. ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದರು. ಇವರು ಮಾರಾಟ ಮಾಡಿದ ಎಂಡಿಎಂಎ ಮಾದಕ ವಸ್ತುವಿನ ಹಣವನ್ನು ಗ್ಯಾಂಗ್ ಇವರಿಗೆ ಕೊಡುವುದು ಬಾಕಿ ಇತ್ತು. ಹಣ ಕೊಡುವಂತೆ ಕೇಳಿದ್ದಕ್ಕೆ ಗ್ಯಾಂಗ್‌ ಇಬ್ಬರ ಮೇಲೆ ಹಲ್ಲೆ ನಡೆಸಿದೆ.

ದಾಳಿಯ ಬಗ್ಗೆ ಸುಳಿವು ಪಡೆದ ಪೊಲೀಸರು ವಿಚಾರಣೆ ವೇಳೆ, ಕೊಲ್ಲಂ ಮೂಲದ ಎಸ್ ಶಿಜು (25) ಮತ್ತು ತ್ರಿಶೂರ್ ಡೊನಾಲ್ ವಿಲ್ಸನ್ (27) ಮಾದಕ ದ್ರವ್ಯ ದಂಧೆಕೋರರು ಎಂದು ಪತ್ತೆ ಮಾಡಿದರು. ವರ್ತೂರಿನ ಮುತ್ತಾನಲ್ಲೂರು ಕ್ರಾಸ್ ಬಳಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.

Advertisements

ದಂಧೆಕೋರರ ಮೇಲೆ ಹಲ್ಲೆ ಮಾಡಿದ ಗ್ಯಾಂಗ್‌ನವರ ವಿರುದ್ಧ ಪೊಲೀಸರು ಅವರಿಂದ ದೂರು ಪಡೆದಿದ್ದಾರೆ. ಗ್ಯಾಂಗ್‌ನಲ್ಲಿರುವವರು ಡ್ರಗ್ಸ್ ದಂಧೆಕೋರರೂ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಶಿಜು ಮತ್ತು ವಿಲ್ಸನ್ ಉದ್ಯೋಗ ಅರಸಿ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ನಗರದ ವರ್ತೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಅವರು ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಕೆಲಸಕ್ಕೆ ಸೇರಿಕೊಂಡರು. ಜೀವನ ನಿರ್ವಹಣೆ ಮಾಡಲಾಗದೆ, ಮಾರತ್ತಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾದಕ ವಸ್ತು ಮಾರಾಟ ಆರಂಭಿಸಿದ್ದರು.

ವಿಚಾರಣೆ ವೇಳೆ, ಶಿಜು ಮತ್ತು ವಿಲ್ಸನ್ ತಮ್ಮ ಸ್ನೇಹಿತ ಸಂಜು ಮತ್ತು ಇತರ ಐವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ವಿಪ್ರೋ ಗೇಟ್ ಬಳಿ ಡ್ರಗ್ಸ್ ಮಾರಾಟ ಮಾಡಲು ತೆರಳಿದ್ದ ಶಿಜು ಮತ್ತು ವಿಲ್ಸನ್, ಸಂಜು ಅವರನ್ನು ನೋಡಿ ತಮ್ಮಿಂದ ಖರೀದಿಸಿದ ಎಂಡಿಎಂಎ ಕ್ರಿಸ್ಟಲ್‌ಗೆ ಹಣ ನೀಡುವಂತೆ ಕೇಳಿದ್ದಾರೆ. ಇದರಿಂದ ಕುಪಿತಗೊಂಡ ಸಂಜು ಮತ್ತು ಆತನ ಸಹಚರರು ಶಿಜು ಮತ್ತು ವಿಲ್ಸನ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 5,059 ಇವಿ ಚಾರ್ಜಿಂಗ್ ಸ್ಟೇಷನ್‌ಗಳೊಂದಿಗೆ ದೇಶದಲ್ಲಿಯೇ ಅಗ್ರಸ್ಥಾನಕ್ಕೇರಿದ ಕರ್ನಾಟಕ

ರವಿವಾರ ಸಂಜೆ ಸರ್ಜಾಪುರಮಾರತ್ತಹಳ್ಳಿ ರಸ್ತೆಯ ಮುತ್ತಾನಲ್ಲೂರು ಕ್ರಾಸ್ನಲ್ಲಿರುವ ಹೋಟೆಲ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶಿಜು ಮತ್ತು ವಿಲ್ಸನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 35,000 ಮೌಲ್ಯದ ಎರಡು ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು ಮತ್ತು ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಜು ಮತ್ತು ಇತರ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X