ಪರವಾನಗಿ ಪಡೆಯದೆ ಕಬ್ಬು ನುರಿದ ಆರೋಪ; ಬಿಜೆಪಿ ಶಾಸಕ ಯತ್ನಾಳ್‌ಗೆ ನೋಟಿಸ್‌

Date:

Advertisements

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒಡೆತನದ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಪರವಾನಗಿ ಪಡೆಯದಿಲ್ಲ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ತ್ನಾಳ್‌ಗೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆ ಆಯುಕ್ತರು ಮತ್ತು ನಿರ್ದೇಶಕರು ನೋಟಿಸ್‌ ಜಾರಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ಕಾರ್ಖಾನೆಯ ಸಿದ್ಧಸಿರಿ ಎಥೆನಾಲ್ ಮತ್ತು ವಿದ್ಯುತ್ ಘಟಕದಲ್ಲಿ ಪರವಾನಗಿ ಪಡೆಯದೆ ಕಬ್ಬು ನುರಿಯಲು ಆರಂಭಿಸಲಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಸಕ್ಕರೆ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ನೋಟಿಸ್‌ಗೆ 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಫೆಬ್ರವರಿ 16ರಂದು ತಾಕೀತು ಮಾಡಿದೆ.

“ಕಬ್ಬು ನುರಿಯಲು ಪರವಾನಗಿಗಾಗಿ ಸಲ್ಲಿಸಿದ್ದ ಅರ್ಜಿಯಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಿಲ್ಲ. ಈ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೂಕ್ತ ದಾಖಲೆ ಒದಗಿಸುವಂತೆ ಸೂಚಿಸಲಾಗಿತ್ತು. ಆದರೆ, ಅಗತ್ಯ ದಾಖಲೆ ಸಲ್ಲಿಸಿ, ಪರವಾನಗಿ ಪಡೆಯದೆ ಕುಬ್ಬು ನುರಿಯಲು ಆರಂಭಿಸಿದ್ದೀರಿ. ಇದು ಕಬ್ಬು (ನಿಯಂತ್ರಣ) ಆದೇಶ-1966ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಸಕ್ಕರೆ ಇಲಾಖೆಯ ಅಧಿಕಾರಿಗಳು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

Advertisements

“ಪರವಾನಗಿ ಪಡೆಯದೆ ಕಬ್ಬು ನುರಿಯಲು ಆರಂಭಿಸಿರುವ ನಿಮ್ಮ ವಿರುದ್ಧ ಯಾಕೆ ಮೊಕದ್ದಮೆ ದಾಖಲಿಸಬಾರದು ಎಂಬುದಕ್ಕೆ ಸಮಜಾಯಿಸಿ ನೀಡುವಂತೆ ಈ ಹಿಂದೆ (ಜ.24) ಪತ್ರ ಬರೆಯಲಾಗಿತ್ತು. ಆದರೆ, ನೀವು ಸಮಜಾಯಿಷಿ ನೀಡಿಲ್ಲ. ಈಗ, 24 ಗಂಟೆಯೊಳಗೆ ಉತ್ತರಿಸದಿದ್ದರೆ, ಮೊಕದ್ದಮೆ ದಾಖಲಿಸಲಾಗುತ್ತದೆ” ಎಂದು ನೋಟೀಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X