ಬೆಂಗಳೂರು | ಮೀಟರ್ ಬಡ್ಡಿ ದಂಧೆ; ಸೈಕಲ್ ರವಿ ಸಹಚರರ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್‌ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ, ಮೀಟರ್ ಬಡ್ಡಿ ದಂಧೆಯಲ್ಲಿ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಉಮೇಶ್, ಸುರೇಶ್ ಹಾಗೂ ಮಂಜುನಾಥ್​ ಬಂಧಿತ ಆರೋಪಿಗಳು. ಈ ಬಗ್ಗೆ ಆರ್​ಆರ್​ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಂಗನಾಥ್ ಎಂಬುವವರು ಟ್ರಾವೆಲ್ಸ್‌ ವ್ಯವಹಾರಕ್ಕಾಗಿ ಆರೋಪಿ ಮಂಜುನಾಥ್ ಎಂಬುವವರ ಬಳಿ ₹23 ಲಕ್ಷ ಹಣವನ್ನು ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. ರಂಗನಾಥ್ ಅವರು ಪಡೆದ ₹23 ಲಕ್ಷ ಹಣವನ್ನ ಬಡ್ಡಿ ಸಮೇತ ಆರೋಪಿ ಮಂಜುನಾಥ್‌ಗೆ ಹಿಂದಿರುಗಿಸಿದ್ದರು.

Advertisements

ಆದರೆ, ಆರೋಪಿ ಮಂಜುನಾಥ್, “ಮೀಟರ್ ಬಡ್ಡಿಗೆ ಹಣ ನೀಡಿದ್ದೇನೆ. ಇನ್ನು ₹5 ಲಕ್ಷ ಹಣ ಕೊಡಬೇಕು” ಎಂದು ಪಟ್ಟು ಹಿಡಿದಿದ್ದನು. ರಂಗನಾಥ್‌ ಹಣ ನೀಡಲು ನಿರಾಕರಿಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ನಾಮಫಲಕ ಬಳಸದ 18 ಉದ್ದಿಮೆಗಳು ತಾತ್ಕಾಲಿಕ ಬಂದ್

ಆರೋಪಿ ಮಂಜುನಾಥ್ ಈ ಸಾಲದ ಹಣವನ್ನು ವಸೂಲಿ ಮಾಡಿಕೊಡಲು ಸೈಕಲ್ ರವಿ ಸಹಚರನಾದ ಉಮೇಶ್​ಗೆ ಹೇಳಿದ್ದನು. ಉಮೇಶ್ ತನ್ನ ಸಹಚರನಾದ ಸುರೇಶ್ ಜತೆಗೆ ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದನು. ರೌಡಿಶೀಟರ್ ಉಮೇಶ್ ಹಾಗೂ ಸುರೇಶ್ ರಂಗನಾಥ್​​ಗೆ ಹಣ ಕೊಡುವಂತೆ ಜೀವ ಬೆದರಿಕೆ ಹಾಕಿದ್ದಾರೆ. ಹೊಸಕೆರೆಹಳ್ಳಿ ಉಮೇಶ್​ ರಂಗನಾಥನಿಗೆ ಅವಾಜ್ ಹಾಕಿರುವ ಆಡಿಯೋ ವೈರಲ್ ಆಗಿದೆ.

ಈ ವಿಚಾರ ತಿಳಿದ ಸಿಸಿಬಿ ಪೊಲೀಸರು ಉಮೇಶ್, ಸುರೇಶ್ ಹಾಗೂ ಮಂಜುನಾಥ್​​ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಆರೋಪಿಗಳ ವಿರುದ್ಧ ಆರ್​ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X