ದಾವಣಗೆರೆ | ʼಸರ್ಕಾರಗಳು ಯೋಜನೆ ಘೋಷಣೆ ಮಾಡುವುದಕ್ಕೂ ಮೊದಲು ರೈತರೊಂದಿಗೆ ಚರ್ಚಿಸಬೇಕುʼ

Date:

Advertisements

ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಒತ್ತಾಯಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಾರ್ವಜನಿಕರಿಗೆ 29ರೂ.ಗಳಿಗೆ ಅಕ್ಕಿ ಕೊಡುವ ಯೋಜನೆಯನ್ನು ಜಾರಿಗೊಳಿಸಿದೆ. ಅದೇ ರೀತಿ ಕೇಂದ್ರ ಸರ್ಕಾರ ರೈತ ಬೆಳೆದ ಭತ್ತಕ್ಕೆ 2,180 ರೂ.ಗಳ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ. ಈ ಬೆಂಬಲ ಬೆಲೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಜಾರಿಗೊಳಿಸಿದರೆ, ಮಾತ್ರ ರೈತನ ಬದುಕ ಹಸನಾಗಿ ಉಳಿಯುವುದಕ್ಕೆ ಅವಕಾಶವಿದೆ.

ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆಯನ್ನು ಮಾಡದೇ ಕೇಂದ್ರ ಸರ್ಕಾರ 29 ರೂ.ಗಳಿಗೆ ಅಕ್ಕಿ ಹಾಗೂ ರಾಜ್ಯ ಸರ್ಕಾರ ಉಚಿತ ಅಕ್ಕಿ ಘೋಷಣೆ ಮಾಡಿದರೆ ರೈತ ಯಾವ ದರಕ್ಕೆ ಭತ್ತವನ್ನು ಮಾರಬೇಕು, ಖರೀದಿದಾರರು ಯಾವ ದರಕ್ಕೆ ಖರೀದಿ ಮಾಡಬೇಕು ಎಂಬುವುದು ಗೊತ್ತಾಗದೇ ಈ ದಿನ ರೈತ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಖರೀದಿದಾರರು ಇಲ್ಲದ ಪರಿಸ್ಥಿತಿ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ದೆಹಲಿಯಲ್ಲಿ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆಯನ್ನು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ ಹಾಗೂ ಕಳೆದ ಬಾರಿ  ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಮಾಡುತ್ತೇವೆಂದು ಎಂದು ಹೇಳಿದ ಕೇಂದ್ರ ಸರ್ಕಾರ ಪತ್ರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆಯನ್ನು ಮಾಡಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರವು ಫಾರಂ 52, 53, 57ರಲ್ಲಿ ಹಾಕಿರುವ ಬಗರ್ ಹುಕುಂ ಅರ್ಜಿಗಳನ್ನು ಈ ಕೂಡಲೇ ಇತ್ಯಾರ್ಥಗೊಳಿಸಿ ಹಕ್ಕು ಪತ್ರಗಳನ್ನು ನೀಡಬೇಕೆಂದರು.

ಜಗಳೂರು ತಾಲೂಕಿನಲ್ಲಿ ತೀವ್ರವಾದ ಕುಡಿಯುವ ನೀರಿನ ಸಮಸ್ಯೆ ಇದ್ದು, ಸುಮಾರು 80ಕ್ಕಿಂತ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ದನಕರುಗಳಿಗೆ ಕುಡಿ ಕುಡಿಯಲು ನೀರು, ಮೇವಿನ ಅಭಾವವಿರುವುದರಿಂದ ಜಿಲ್ಲಾಡಳಿತ ಬೋರ್- ವೆಲ್ ಗಳನ್ನು ಕೊರೆದು ಕುಡಿಯಲು ನೀರು ಹಾಗೂ ದನಕರುಗಳಿಗೆ ಗೋಶಾಲೆಗಳನ್ನು ತೆರೆಯಬೇಕೆಂದರು.

ರಾಜ್ಯ ಸರ್ಕಾರ ಅಕ್ರಮ-ಸಕ್ರಮ ವಿದ್ಯುತ್ ಯೋಜನೆಯನ್ನು ಮುಂದುವರೆಸಬೇಕು, ನಿವೇಶನ ರಹಿತ ಗ್ರಾಮಗಳಲ್ಲಿ ಇರುವ ಕುಟುಂಬಗಳಿಗೆ ಸರ್ಕಾರದ ಜಮೀನು ಲಭ್ಯವಿದ್ದರೂ ಸಹ ನಿವೇಶನಗಳನ್ನು ಮಾಡಿ ನಿವೇಶನ ನೀಡಿಲ್ಲ. ಸಾವಿರಾರು ಕುಟುಂಬಗಳು ನಿವೇಶನವಿಲ್ಲದೆ ಅತಂತ್ರ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಜಿಲ್ಲಾ ಪಂಚಾಯಿತಿ ನಿವೇಶನಗಳನ್ನು ನೀಡುವುದು ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.

ಫೆ. 19ರಂದು ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಿಂದ ಬೃಹತ್ ಪಾದಯಾತ್ರೆಯ ಕೈಗೊಂಡು, ಫೆ.22ರಂದು ಜಿಲ್ಲಾಧಿಕಾರಿಗಳ ಕಛೇರಿ ತಲುಪಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೈದಾಳೆ ರವಿಕುಮಾ‌ರ್, ಯಲೋದಹಳ್ಳಿ ರವಿಕುಮಾರ್, ಬಾಲಾಜಿ, ಅಸ್ತಾಪನಹಳ್ಳಿ ಗಂಡುಗಲಿ, ಪೂಜಾರ್ ಅಂಜಿನಪ್ಪ, ಬಸಣ್ಣ, ಕುಮಾರ್, ನಾಗರಾಜ್, ಕೃಷ್ಣಮೂರ್ತಿ, ಹನುಮಂತ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X