ದಕ್ಷಿಣ ಕನ್ನಡ | ಜೆರೋಸಾ ಶಾಲೆ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಸಚಿವ ದಿನೇಶ್ ಗುಂಡುರಾವ್ 

Date:

Advertisements

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಗುಲ್ಬರ್ಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಐಎಎಸ್ ಅಧಿಕಾರಿ ಡಾ.ಆಕಾಶ್ ಎಸ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ತಿಳಿಸಿದರು.

ಮಂಗಳೂರು ನಗರಲ್ಲಿ ಈ ದಿನ.ಕಾಮ್ ಜೊತೆ ಮಾತನಾಡಿದ ಸಚಿವರು, “ಶಾಲೆಯಲ್ಲಿ ನಡೆದಿರುವ ಪಠ್ಯ ಪ್ರವಚನದ ಬಗ್ಗೆಯೂ ಕೂಡ ತನಿಖೆಯಾಗಲಿದೆ. ಪೋಷಕರ ದೂರಿನ ಬಗ್ಗೆಯೂ ತನಿಖೆಯಾಗಲಿದೆ” ಎಂದು ಸಚಿವರು ತಿಳಿಸಿದರು.

“ಶಾಲೆಯೊಳಗೆ ಇತ್ಯರ್ಥಪಡಿಸಬಹುದಾಗಿದ್ದ ವಿಚಾರವನ್ನು ಶಾಸಕರಿಬ್ಬರು ಸೇರಿಕೊಂಡು ಆಶಾಂತಿಯ ಹಾಗೂ ಭಯ ಹುಟ್ಟಿಸುವ ರೀತಿಯಲ್ಲಿ ಪರಿವರ್ತನೆ ಮಾಡಿದ್ದು ನಿಜಕ್ಕೂ ವಿಷಾದನೀಯ. ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರವಾಗಿದೆ” ಎಂದು ಸಚಿವ ಗುಂಡುರಾವ್ ಅವರು ಹೇಳಿದರು.

Advertisements

“ಪ್ರಕರಣದ ಒಟ್ಟಾರೆ ಸಂಚು ಯಾವ ರೀತಿ ನಡೆದಿತ್ತು, ಯಾರು ಸಂಚು ರೂಪಿಸಿದರು, ಶಾಸಕರು ಯಾವ ರೀತಿಯಲ್ಲಿ ಪ್ರಚೋದನೆ ಮಾಡಿದರು ಎನ್ನುವ ಬಗ್ಗೆ ಕೂಡ ತನಿಖೆ ನಡೆಯಲಿದೆ” ಎಂದು ಸಚಿವ ಗುಂಡುರಾವ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸಿಪಿಐಎಂಎಲ್ ರೆಡ್ ಸ್ಟಾರ್

ಶಾಸಕ ವೇದವ್ಯಾಸ ಕಾಮತ್ ಶಾಲೆಯ ಬಳಿಗೆ ಬಂದು ಇನ್ನೋರ್ವ ಶಾಸಕ ಭರತ್ ಶೆಟ್ಟಿ ಶಿಕ್ಷಣಾಧಿಕಾರಿ ಕಚೇರಿ ಬಳಿ ಜನ ಸೇರಿಸಿ ಕೋಮು ಪ್ರಚೋದನೆ ಮಾಡಿರುವುದು ದಾಖಲೆ ಸಹಿತ ಸಾಬೀತಾಗಿದೆ. ಇದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಇದೀಗ ತಮ್ಮ ಮೇಲಿನ ಎಫ್‌ಐಆರ್ ಹಿಂಪಡೆಯುವಂತೆ ಈ ಶಾಸಕರಿಬ್ಬರು ಒತ್ತಾಯಿಸುತ್ತಿದ್ದಾರೆ. ಆದರೆ ಅವರು ಆಗ್ರಹಿಸಿದ ಎಫ್‌ಐಆರ್ ಹಿಂಪಡೆಯಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ, ಕಾನೂನಿನ ಪ್ರಕಾರವೇ ಕ್ರಮ ಜರುಗಿಸಲಾಗುವುದು” ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X