ದೇಶ ಸೇವೆ ಮಾಡಲು ಸ್ವಾಮೀಜಿಗಳು ರಾಜಕೀಯಕ್ಕೆ ಬಂದರೆ ತಪ್ಪೇನಿಲ್ಲ: ಕೆ ಎಸ್‌ ಈಶ್ವರಪ್ಪ

Date:

Advertisements

ಮಾದರ ಚೆನ್ನಯ್ಯ ಸ್ವಾಮೀಜಿಗಳು ರಾಜಕೀಯಕ್ಕೆ ಬರಲೇಬಾರದಾ? ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಕು. ದೇಶ ಸೇವೆ ಮಾಡಲು ಸ್ವಾಮೀಜಿಗಳು ರಾಜಕೀಯಕ್ಕೆ ಬಂದರೆ ತಪ್ಪೇನಿಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು.

ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಿಜೆಪಿ ಟಿಕೆಟ್ ಕೊಟ್ಟರೆ ನಾನಂತೂ ಖುಷಿ ಪಡುತ್ತೇನೆ. ಚರ್ಚೆ ಆಗಿದ್ದರೆ ಇದರಲ್ಲಿ ತಪ್ಪಿಲ್ಲ” ಎಂದರು.

“ರಾಜಕೀಯ ಪಕ್ಷಗಳು ಎಂದ ಮೇಲೆ ಒಂಚೂರು ಗಲಾಟೆ ಇದ್ದಿದ್ದೇ. ಸಾಮಾನ್ಯ ಅಲ್ಲಲ್ಲಿ ಮಾತ್ರ ಬಡಿದಾಟ ಇದೆ. ನಮ್ಮ ಪಕ್ಷದ ಅಸಮಾಧಾನಿತರನ್ನು ಕರೆದು ರಿಪೇರಿ ಮಾಡುತ್ತೇವೆ” ಎಂದು ಈಶ್ವರಪ್ಪ ತಿಳಿಸಿದರು.

Advertisements

“ರಾಮಮಂದಿರದಲ್ಲಿ ಪರಿಶಿಷ್ಟ ಜಾತಿಯವರಿಗೆ ಆಹ್ವಾನ ಇರಲಿಲ್ಲ ಎಂದು ರಾಹುಲ್‌ ಹೇಳಿದ್ದಾರೆ. ದೇಶವನ್ನು ವಿಭಜಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಧರ್ಮದ ಬಗ್ಗೆ ಸಹ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ದೇಶವನ್ನು ಒಂದುಗೂಡಿಸುವ ರಾಮಮಂದಿರ ಕಾರ್ಯಕ್ರಮವಾಗಿತ್ತು. ರಾಹುಲ್ ಗಾಂಧಿ ಹೇಳಿಕೆಯಿಂದ ಬೇಸರ ಆಗಿದೆ. ರಾಹುಲ್ ಗಾಂಧಿ ಅವರು ಈ ದೇಶದ ಜನತೆಯ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

“ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಸಹ ಭಾಗಿಯಾಗಿದ್ದರು. ಅದೇ ರೀತಿ ಕಾಗಿನೆಲೆ ಸ್ವಾಮೀಜಿ ಸಹ ರಾಮಮಂದಿರ ಉದ್ಘಾಟನೆಗೆ ಹೋಗಿದ್ದರು. ಅಲ್ಲದೆ ಇಂತಹ ಅನೇಕ ಸಾಧು ಸಂತರು ಸಹ ರಾಮಮಂದಿರ ಲೋಕಾರ್ಪಣೆಗೆ ಬಂದಿದ್ದರು. ಹಿಂದೂ ಸಮಾಜವನ್ನು ಜೋಡಿಸುವ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು” ಎಂದರು‌.

ಜ್ಞಾನ ದೇಗುಲ ವಿಚಾರಕ್ಕೆ ಪ್ರತಿಕ್ರಿಯಿಸಿ, “ಯಾರಿಗೆ ಪ್ರಶ್ನೆ ಮಾಡಬೇಕು, ಎಲ್ಲೆಲ್ಲಿ ಎಷ್ಟು ಲೂಟಿ ಆಗುತ್ತೆ ಅಂತ ಪ್ರಶ್ನೆ ಮಾಡಬೇಕಾ? ಆ ಬೋರ್ಡ್ ಹಾಕಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೆ ಏನು ಆದೇಶ ಮಾಡ್ತಿವಿ ಅನ್ನೋದು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲದೆ ಆದೇಶ ಮಾಡುತ್ತಾರಾ?” ಎಂದು ಕಿಡಿಕಾರಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X