ರಾಯಚೂರು | ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ನಿಧನ; ಕಾರ್ಯನಿರತ ಪತ್ರಕರ್ತರ ಸಂಘದಿಂದ ಶದ್ಧಾಂಜಲಿ

Date:

Advertisements

ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ರಮೇಶ ಗೋರೆಬಾಳ ಅವರು ಭಾನುವಾರ ಹೃದಯಘಾತದಿಂದ ನಿಧನರಾಗಿದ್ದು, ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ, ರಮೇಶ ಗೋರೆಬಾಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿ ಮೌನಾಚರಿಸಿ ಸಂತಾಪ ಸೂಚಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್ ಗುರುನಾಥ ಮಾತನಾಡಿ, “ಕಳೆದ 20 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ರಮೇಶ ಗೋರೆಬಾಳ ಅವರ ನಿಧನದಿಂದ ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ” ಎಂದರು.

“ಪತ್ರಿಕೆ ಏಜೆಂಟರಾಗಿ ಕೆಲಸ ಮಾಡುವುದರ ಜತೆಗೆ ಜಿಲ್ಲಾ ಮಟ್ಟದ ಪತ್ರಿಕೆಯೊಂದನ್ನು ಹುಟ್ಟುಹಾಕಿ ಮುನ್ನಡೆಸುತ್ತಿದ್ದ ರಮೇಶ ಗೋರೆಬಾಳ ಅತಿ ಚಿಕ್ಕ ವಯಸ್ಸಿನಲ್ಲಿ ನಿಧನರಾಗಿರುವುದು ದುಖಃದ ಸಂಗತಿ. ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು” ಎಂದು ಸಲಹೆ ನೀಡಿದರು.

Advertisements

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ ಮಾತನಾಡಿ, “ಏಜೆಂಟರಾಗಿ ಕೆಲಸ ಮಾಡುವುದರ ಜತೆಗೆ ಜಿಲ್ಲಾ ಮಟ್ಟದ ಪತ್ರಿಕೆಯನ್ನು ಮುನ್ನಡೆಸಿದರು. ಸಂಕಷ್ಟದಲ್ಲಿ ಪತ್ರಿಕೆಯನ್ನು ಆರಂಭ ಮಾಡಿ ಯಶಸ್ಸು ಕಂಡಿದ್ದರು. ಪತ್ರಕರ್ತರು ಒತ್ತಡಗಳಿಗೆ ಒಳಗಾಗದೇ ಆರೋಗ್ಯಕ್ಕೆ ಒತ್ತು ನೀಡಬೇಕಿದೆ” ಎಂದರು.

ಪತ್ರಕರ್ತರಾದ ಸಿದ್ದು ಬಿರಾದರ್, ಲಕ್ಷ್ಮಣರಾಯ್ ಕಪಗಲ್, ಆನಂದಸ್ವಾಮಿ, ಜಯಕುಮಾರ ದೇಸಾಯಿ, ಅಂಬಣ್ಣ ಅರೋಲಿ ಸೇರಿದಂತೆ ಅನೇಕ ಪತ್ರಕರ್ತರು ಮಾತನಾಡಿ ಸಂತಾಪ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯ ಹೆದ್ದಾರಿಯಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ಸಭೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಪಾಷಾ ಹಟ್ಟಿ, ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಮಡಿವಾಳರ್, ಹಿರಿಯ ಪತ್ರಕರ್ತರಾದ ದತ್ತು ಸರ್ಕಿಲ್, ಬಸವರಾಜ ನಾಗಡದಿನ್ನಿ, ಧೀರೆಂದ್ರ ಕುಲಕರ್ಣಿ, ಸಿದ್ದಯ್ಯಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಭೀಮಸೇನ ಕಲ್ಲೂರು, ವಿಜಯ ಜಾಗಟಗಲ್, ಜಗನ್ನಾಥ ಪೂಜಾರಿ, ಚಂದ್ರಕಾಂತ ಮಸಾನಿ, ವೆಂಕಟೇಶ ಹೂಗಾರ, ರಾಮಕೃಷ್ಣ ದಾಸರಿ, ಭೀಮೇಶ ಪೂಜಾರಿ, ರಾಚಯ್ಯಸ್ವಾಮಿ, ನೀಲಕಂಠಸ್ವಾಮಿ, ಪ್ರಸನ್ನಕುಮಾರ ಜೈನ್, ಶ್ಯಾಮಸುಂದರ್ ಲಂಗೋಟಿ, ಭಾವಸಲಿ, ಅಬ್ದುಲ್ ಖಾದರ್, ದುರುಗೇಶ, ಎ ಎಲ್ ತಾಯಪ್ಪ, ಶಿವಕುಮಾರ, ಹನುಮಂತು ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X