ಬೆಂಗಳೂರು | ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ವಂಚನೆ; ದಂಪತಿ ಬಂಧನ

Date:

Advertisements

ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು ಟಾರ್ಗೆಟ್‌ ಮಾಡಿ ಅವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದರು. ರಾಜಕಾರಣಿಗಳ ಪರಿಚಯವಿದೆ. ಜತೆಗೆ ನಾನಾ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಪರಿಚಯವಿದ್ದಾರೆ. ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಕೆಲಸ ಕೊಡಿಸುತ್ತೇವೆ ಎಂದು ನಿರುದ್ಯೋಗಿ ಯುವಕರನ್ನು ನಂಬಿಸಿದ್ದಾರೆ.

ಬಳಿಕ ನಿರುದ್ಯೋಗಿ ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡುತ್ತಿದ್ದರು. ಓರ್ವ ನಿರುದ್ಯೋಗಿಯಿಂದ ₹6 ಲಕ್ಷ ಹಣ ಪಡೆದು ಕೆಲಸ ಕೊಡಿಸದೇ ಸತಾಯಿಸುತ್ತಿದ್ದರು. ಈ ಆರೋಪಿಗಳ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಅಲ್ಲದೇ, ನಗರದ ಹಲವು ಠಾಣೆಗಳಲ್ಲಿ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧ ಆರೋಪ; ಪತ್ನಿ ಮೇಲೆ ನಡುರಸ್ತೆಯಲ್ಲೇ ಹಲ್ಲೆಗೈದ ದುಷ್ಟ ಪತಿ

ಸದ್ಯ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, ಒಂದು‌‌ ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್‌ಗೆ ಸೇರಿದಂತೆ 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್, 11 ನಾನಾ ಕಂಪನಿಯ ವಾಚ್‌ಗಳು, ಚಿನ್ನದಂತೆ ಕಾಣುವ 2 ನಕಲಿ‌ ಬ್ರೇಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X