ಬೆಂಗಳೂರು | ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ವಿರುದ್ಧ ಕ್ರಮ; ಹೈಕೋರ್ಟ್‌ಗೆ ವರದಿ ನೀಡಿದ ಬಿಬಿಎಂಪಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಅಳವಡಿಸಿದ ಜಾಹೀರಾತು ಫಲಕಗಳ ತೆರವು ಹಾಗೂ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರದಿ ಸಲ್ಲಿಸಿದೆ.

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ಬಗ್ಗೆ ಆಕ್ಷೇಪಿಸಿ ನಗರದ ಸರಸ್ವತಿಪುರ ನಿವಾಸಿ ಮಾಯಿಗೇಗೌಡ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ ಮತ್ತು ಟಿ.ಜಿ.ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದೆ.

ನ್ಯಾಯಪೀಠಕ್ಕೆ ಬಿಬಿಎಂಪಿ ವಕೀಲರು ವರದಿ ಸಲ್ಲಿಸಿದರು. ಈ ವರದಿಯನ್ನು ಪರಿಶೀಲಿಸಿ, ಅದರಲ್ಲಿನ ಆಕ್ಷೇಪಣೆಗಳಿದ್ದರೆ, ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿದೆ. ವಿಚಾರಣೆ ಮುಂದೂಡಿದೆ.

Advertisements

2024ರ ಜನವರಿ 19ರಿಂದ ಫೆಬ್ರವರಿ 10ರ ವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಅಳವಡಿಸಿರುವ ಜಾಹೀರಾತು ಫಲಕಗಳ ತೆರವು ಮಾಡುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗಿದೆ.

ಈಗ ನಡೆಸಿದ ಸಮೀಕ್ಷೆಯಲ್ಲಿ ನಗರದಲ್ಲಿ 402 ಜಾಹೀರಾತು ಫಲಕ ಗುರುತು ಮಾಡಲಾಗಿದೆ. ಅವುಗಳ ಪೈಕಿ 150 ಅಧಿಕೃತ ಹಾಗೂ 251 ಅನಧಿಕೃತವಾಗಿದೆ. ಇನ್ನು 40 ಜಾಹೀರಾತುಗಳ ಅಳವಡಿಕೆ ಕುರಿತಂತೆ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿಯಿದೆ.

203 ಜಾಹೀರಾತು ಅಳವಡಿಕೆದಾರರ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ. ಈ ಪೈಕಿ 73 ಅಳವಡಿಕೆದಾರರೇ ಸ್ವಯಂ ಪ್ರೇರಿತವಾಗಿ ಜಾಹೀರಾತು ತೆರುವು ಮಾಡಿದ್ದರೇ, 123 ಜಾಹೀರಾತುಗಳನ್ನು ಬಿಬಿಎಂಪಿ ತೆರವುಗೊಳಿಸಿದೆ. ಇನ್ನು 12 ಜಾಹೀರಾತು ಫಲಕಗಳ ತೆರವುಗೊಳಿಸುವ ಕಾರ್ಯ ಬಾಕಿಯಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ; ರಾಜ್ಯ ಸರ್ಕಾರದ ಸುತ್ತೋಲೆ

ಬಿಬಿಎಂಪಿಯಿಂದ ಅನುಮತಿ ಪಡಿಯದೇ ಅನಧಿಕೃತವಾಗಿ ಜಾಹೀರಾತು ಹೋರ್ಡಿಂಗ್ ಹಾಕಿದವರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ವರದಿಯಲ್ಲಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X