ಯಶಸ್ವಿ ಜೈಸ್ವಾಲ್ ಎರಡು ದ್ವಿಶಕ ಸಾಧನೆ: ಐಸಿಸಿ ಟಾಪ್ 20 ಟೆಸ್ಟ್ ಶ್ರೇಯಾಂಕದಲ್ಲಿ ಜೈಸ್ವಾಲ್‌ಗೆ ಸ್ಥಾನ

Date:

Advertisements

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್ ಸರಣಿಯಲ್ಲಿ ಸತತ ಎರಡು ದ್ವಿಶತಕ ಸಾಧನೆ ಮಾಡಿರುವ ಟೀಂ ಇಂಡಿಯಾದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‌ ಅವರು ಐಸಿಸಿ ಪುರುಷರ ಟೆಸ್ಟ್‌ ಶ್ರೇಯಾಂಕದ 20ರ ಬಳಗದಲ್ಲಿ 14ನೇ ಸ್ಥಾನ ಪಡೆದಿದ್ದಾರೆ.

ಜೈಸ್ವಾಲ್ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ಪರ ವಿಶಾಖಪಟ್ಟಣ ಹಾಗೂ ರಾಜ್‌ಕೋಟ್‌ನಲ್ಲಿ ದ್ವಿಶತಕ ಬಾರಿಸುವ ಮೂಲಕ ಇಂಡಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಐಸಿಸಿ 20ರ ಬಳಗದ ಶ್ರೇಯಾಂಕದಲ್ಲಿ ಭಾರತದ ನಾಲ್ವರು ಬ್ಯಾಟರ್‌ಗಳು ಸ್ಥಾನ ಪಡೆದಿದ್ದಾರೆ. 7ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ, 12ನೇ ಸ್ಥಾನದಲ್ಲಿ ರೋಹಿತ್ ಶರ್ಮಾ, 14ನೇ ಸ್ಥಾನದಲ್ಲಿ ರಿಷಬ್ ಪಂತ್ ಹಾಗೂ 15ನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್‌ ಇದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ದಕ್ಷಿಣ ಆಫ್ರಿಕಾ ವಿರುದ್ಧ ಹ್ಯಾಮಿಲ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಟೆಸ್ಟ್‌ನ ಎರಡು ಇನಿಂಗ್ಸ್‌ನಲ್ಲಿಯೂ ಶತಕ ಬಾರಿಸಿದ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್‌ ಮೊದಲ ಶ್ರೇಯಾಂಕದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಆಸೀಸ್‌ನ ಸ್ಟೀವ್‌ ಸ್ಮಿತ್, ಮೂರನೇ ಸ್ಥಾನದಲ್ಲಿ ಕಿವೀಸ್‌ನ ಡೇರಿಲ್ ಮಿಷಲ್, ನಾಲ್ಕನೇ ಸ್ಥಾನದಲ್ಲಿ ಬಾಬರ್‌ ಅಜಂ, ಐದನೇ ಸ್ಥಾನದಲ್ಲಿ ಇಂಗ್ಲೆಂಡ್‌ನ ಜೋರೂಟ್‌ ಸ್ಥಾನ ಪಡೆದಿದ್ದಾರೆ.

ಶ್ರೇಯಾಂಕದ 20ರ ಬಳಗದಲ್ಲಿ ಭಾರತ, ಇಂಗ್ಲೆಂಡ್‌ ಹಾಗೂ ಆಸೀಸ್‌ನ ತಲಾ ನಾಲ್ವರು,  ನ್ಯೂಜಿಲೆಂಡ್‌ನ ಇಬ್ಬರು, ಪಾಕ್‌ನ ಮೂವರು, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾದ ತಲಾ ಒಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

ಐಸಿಸಿ ಟಾಪ್ 20 ಬೌಲಿಂಗ್‌ ವಿಭಾಗದಲ್ಲಿ ಮೊದಲೆರಡು ಸ್ಥಾನದಲ್ಲಿ ಜಸ್‌ಪ್ರೀತ್ ಬೂಮ್ರಾ, ಆರ್‌ ಅಶ್ವಿನ್ ಇದ್ದರೆ,  ಆರನೇ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಮೊಹಮದ್ ಸಿರಾಜ್‌ 19ನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ ವಿಭಾಗದಲ್ಲಿ ರವೀಂದ್ರ ಜಡೇಜಾ, ಆರ್‌ ಅಶ್ವಿನ್ ಮೊದಲೆರಡು ಸ್ಥಾನದಲ್ಲಿದ್ದರೆ, ನಾಲ್ಕನೇ ಸ್ಥಾನದಲ್ಲಿ ಅಕ್ಸರ್‌ ಪಟೇಲ್ ಸ್ಥಾನ ಪಡೆದಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X