ದಾವಣಗೆರೆ | ಹೊರಗುತ್ತಿಗೆ ನೌಕರರ ಮೇಲೆ ದೌರ್ಜನ್ಯ; ದೂರು ದಾಖಲು

Date:

Advertisements

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಎಸ್‌ಸಿ-ಎಸ್‌ಟಿ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಲಾಗಿದೆ.

ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಸ್‌ಸಿ-ಎಸ್‌ಟಿ ಸಿಬ್ಬಂದಿಯನ್ನು ಗೋಣಿವಾಡ ಮಂಜುನಾಥ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಮಾನಸಿಕ ಹಾಗೂ ದೈಹಿಕ ಹಿಂಸೆಗಳನ್ನು ನೀಡುತ್ತಿರುವುದಾಗಿ ಆರೋಪಿಸಿ ಜೈ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಲ್‌.ಸಿ. ನೀಲಗಿರಿ ಅವರು ದೂರು ನೀಡಿದ್ದಾರೆ.

ದಾವಣಗೆರೆಯ ‘ದೀಕ್ಷಾ ಕನ್ಸಲ್ವೆನ್ಸಿ ಮ್ಯಾನ್ ಫವರ್‌ ಮತ್ತು ಸೆಕ್ಯುರಿಟಿ ಸರ್ವೀಸಸ್‌’ನ ಗೋಣಿವಾಡ ಮಂಜುನಾಥ್, ಕೆಟಿಜೆ ನಗರದ ಲೋಹಿತ್, ಮಂಡಿಪೇಟೆಯ ಬಸಣ್ಣ ಹಾಗೂ ಷರೀಫ್ ಅವರುಗಳ ಮೇಲೆ ದೂರು ನೀಡಲಾಗಿದೆ.

Advertisements

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ರೋಗಿಗಳ ಮಲವನ್ನು ಶುಚಿಗೊಳಿಸಬೇಕು. ಎಂದು ಏರು ಧ್ವನಿಯಲ್ಲಿ ನಿಂದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಲೋಹಿತ್ ಅವರು ಬಾಡಿ ವೈಟ್ ಲಿಪ್ಟರ್‌ಗಳನ್ನು ಹಾಗೂ ಹೊರ ವ್ಯಕ್ತಿಗಳನ್ನು ಕರೆತಂದು ಗೋಣಿವಾಡ ಮಂಜುನಾಥ ಇವರು ಹೇಳುವ ಸಿಬ್ಬಂದಿಗಳಿಗೆ ಹಿಂಸೆ ನೀಡುತ್ತಾರೆ. ಪ್ರತೀ ತಿಂಗಳು ಒಬೊಬ್ಬ ಸಿಬ್ಬಂದಿಯಿಂದ 2000 ರೂ. ಪಡೆಯುತ್ತಾರೆ. ಆಸ್ಪತ್ರೆಯಲ್ಲಿ ಒಟ್ಟು 212 ಸಿಬ್ಬಂದಿಗಳು ಹೊರಗುತ್ತಿಗೆ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಮೇಲೆ ದೈಹಿಕವಾಗಿ ಹಲ್ಲೇ ನಡೆಸುವುದು ಇತ್ಯಾದಿ ರೂಪದಲ್ಲಿ ತೊಂದರೆ ಕೊಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಕ್ರಮವಾಗಿ ಗಣೇಶ ಟೀ ಸ್ಟಾಲ್‌ನ್ನು ಗುತ್ತಿಗೆ ನೀಡುವ ಮೂಲಕ ಪ್ರತೀ ತಿಂಗಳು ಬೇನಾಮಿ ಮಾಮೂಲಿ ವಸೂಲಿ ಮಾಡಿಕೊಂಡು ಸರ್ಕಾರಕ್ಕೆ ಬರಬಹುದಾದ ಆದಾಯವನ್ನು ವಂಚಿಸಲಾಗಿದೆ. ಇಲ್ಲಿ ಬರುವ ರೋಗಿಗಳಿಗೆ ಪ್ರತಿನಿತ್ಯ ಮದ್ಯ ಸೇವನೆ ಮಾಡಿ ಹಿಂಸೆ ನೀಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇ.ಎಸ್‌.ಐ. ಹಾಗೂ ಇ.ಪಿ.ಎಫ್.ಗಳನ್ನು ನಿರ್ವಹಣೆ ಮಾಡಿರುವುದಿಲ್ಲ ಮತ್ತು 5 ತಿಂಗಳ ಹೊರಗುತ್ತಿಗೆ ಸಿಬ್ಬಂದಿಯ ವೇತನ ನೀಡಿಲ್ಲ ಎಂದು ನನಗೆ ನೊಂದ ಹೊರಗುತ್ತಿಗೆ ಸಿಬ್ಬಂದಿಗಳಿಂದ ಗುಪ್ತ ಮಾಹಿತಿ ನೀಡಿದ್ದಾರೆ. ಆದ್ದರಿಂದ ತಾವುಗಳು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X