ಐಪಿಎಲ್ 2023 | ತವರಿನಲ್ಲೇ ಟೈಟನ್ಸ್ ಸದ್ದಡಗಿಸಿದ ರಾಯಲ್ಸ್

Date:

Advertisements

ಐಪಿಎಲ್ 16ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನ ಓಟ ಮುಂದುವರಿದಿದೆ.

ಹೈದರಾಬಾದ್‌‌ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 3 ವಿಕೆಟ್ ಅಂತರದಲ್ಲಿ ಮಣಿಸಿದೆ‌.

ಟೈಟನ್ಸ್ ಮುಂದಿಟ್ಟಿದ್ದ 178 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ ರಾಜಸ್ಥಾನ ರಾಯಲ್ಸ್ ಆರಂಭದಲ್ಲೇ 4 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು.

Advertisements

ಆರಂಭಿಕರಾದ ಜೈಸ್ವಾಲ್ 1ರನ್ ಮತ್ತು ಜಾಸ್ ಬಟ್ಲರ್ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಹಾದಿ ಹಿಡಿದಿದ್ದರು.


ಆದರೆ ಬಳಿಕ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ ನಾಯಕ ಸಂಜು ಸ್ಯಾಮ್ಸನ್, 6 ಸಿಕ್ಸರ್ ಗಳನ್ನು ಒಳಗೊಂಡ 60 ರನ್‌ಗಳಿಸಿ ನೂರ್ ಅಹ್ಮದ್ ಬೌಲಿಂಗ್‌ನಲ್ಲಿ ಮಿಲ್ಲರ್ ಗೆ ಕ್ಯಾಚಿತ್ತು ನಿರ್ಗಮಿಸಿದರು.

ಕೊನೆಯಲ್ಲಿ ಬಿರುಸಿನ ಹೊಡೆತಗಳ ಮೂಲಕ ಟೈಟನ್ಸ್ ಬೌಲರ್‌ಗಳ ಬೆವರಿಳಿಸಿದ ವಿಂಡೀಸ್ ದೈತ್ಯ ಬ್ಯಾಟರ್ ಶಿಮ್ರಾನ್ ಹೆಟ್ಮಯರ್, 26 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 2 ಬೌಂಡರಿಗಳ ನೆರವಿನಿಂದ ಅಜೇಯ 56 ರನ್‌ಗಳಿಸಿ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು.

10 ಎಸೆತಗಳಲ್ಲಿ 18 ರನ್‌ಗಳಿಸಿದ ಧ್ರುವ್ ಜುರೇಲ್ ಮತ್ತು ಕೇವಲ 3 ಎಸೆತಗಳಲ್ಲಿ 10 ರನ್‌ಗಳಿಸಿದ ರವಿಚಂದ್ರನ್ ಅಶ್ವಿನ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿಭಾಯಿಸಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಟೈಟನ್ಸ್, ಶುಭಮನ್ ಗಿಲ್ 45 ಮತ್ತು ಡೇವಿಡ್ ಗಳಿಸಿದ 46 ರನ್‌ಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 177 ರನ್‌ಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X