ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

Date:

Advertisements

ರೈತರ ಕಲ್ಯಾಣಕ್ಕಾಗಿ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧವಾಗಿದೆ. ಕಬ್ಬಿನ ಬೆಲೆಯಲ್ಲಿ ‘ಐತಿಹಾಸಿಕ’ ಹೆಚ್ಚಳವು ಅಂತಹ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಅಕ್ಟೋಬರ್‌ನಿಂದ ಪ್ರಾರಂಭವಾಗುವ 2024-25ರ ಕೃಷಿ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ ಪಾವತಿಸುವ ‘ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ’ (ಎಫ್‌ಆರ್‌ಪಿ)ಯನ್ನು 25 ರೂ.ನಿಂದ 340 ರೂ.ವರೆಗೆ ಹೆಚ್ಚಿಸಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಕಬ್ಬು ಬೆಲೆ ಏರಿಕೆಯಿಂದ ಕೋಟ್ಯಂತರ ಕಬ್ಬು ರೈತರಿಗೆ ಅನುಕೂಲವಾಗಲಿದೆ” ಎಂದು ಹೇಳಿದ್ದಾರೆ.

Advertisements

ನಿರ್ಧಾರದ ನಂತರ ಅಧಿಕೃತ ಹೇಳಿಕೆಯು, “ಕಬ್ಬುಬೆಳೆಯುವ ರೈತರ ಏಳಿಗೆಯನ್ನು ಹೊಸ ಎಫ್‌ಆರ್‌ಪಿ ಖಚಿತಪಡಿಸುತ್ತದೆ. ಭಾರತವು ಈಗಾಗಲೇ ವಿಶ್ವದಲ್ಲಿಯೇ ಕಬ್ಬಿಗೆ ಅತ್ಯಧಿಕ ಬೆಲೆಯನ್ನು ಪಾವತಿಸುತ್ತಿದೆ ಎಂಬುದು ಗಮನಾರ್ಹ. ಅದರ ಹೊರತಾಗಿಯೂ ಸರ್ಕಾರವು ದೇಶೀಯ ಗ್ರಾಹಕರಿಗೆ ಅಗ್ಗದ ಬೆಲೆಗೆ ಸಕ್ಕರೆ ದೊರೆಯುವಂತೆ ಮಾಡಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ರೈತರ ಹತ್ಯೆ’ಗೆ ಇತಿಹಾಸ ಬಿಜೆಪಿಯಿಂದ ಉತ್ತರ ಕೇಳುತ್ತದೆ; ರೈತನ ಸಾವಿಗೆ ರಾಹುಲ್ ಗಾಂಧಿ ಸಂತಾಪ

ಅಂದಹಾಗೆ, ಕೇಂದ್ರ ಸರ್ಕಾರ ಲಿಖಿತವಾಗಿ ಭರವಸೆ ನೀಡಿದ್ದ ಎಂಎಸ್‌ಪಿ, ರೈತ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್‌ನಿಂದ ದೆಹಲಿಗೆ ಬರುತ್ತಿದ್ದ ರೈತರನ್ನು ಹರಿಯಾಣ ಗಡಿಯಲ್ಲಿ ತಡೆಯಾಗಿದೆ. ರೈತರ ಹಾದಿಗೆ ಬ್ಯಾರಿಕೇಡ್‌ಗಳು, ಸಿಮೆಂಟ್‌ ಬ್ಲಾಕ್‌ಗಳು, ಮುಳ್ಳಿನ ತಂತಿಗಳು, ಕಬ್ಬಿಣದ ಮೊಳೆಗಳನ್ನು ಹಾಕಲಾಗಿದೆ. ಅದನ್ನೂ ಮೀರಿ ದೆಹಲಿಯತ್ತ ಹೊರಟಿದ್ದ ರೈತರ ಮೇಲೆ ಪೊಲೀಸರು ಟಿಯರ್ ಗ್ಯಾಸ್, ರಬ್ಬರ್ ಗುಂಡಿನ ದಾಳಿ ಮಾಡಿದ್ದಾರೆ. ಬುಧವಾರ ನಡೆದ ರಬ್ಬರ್ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ.

ರೈತರು ಪ್ರತಿಭಟನೆ ನಡೆಸುತ್ತಿರುವ ವೇಳೆ, ಅವರನ್ನು ದೆಹಲಿಗೂ ಬರಲು ಬಿಡದೆ, ದೌರ್ಜನ್ಯ ಎಸಗುತ್ತಿರುವ ಕೇಂದ್ರ ಸರ್ಕಾರ, ಕಬ್ಬು ಬೆಳಗಾರರಿಗೆ ನೀಡುವ ದರದ ಬೆಲೆ ಹೆಚ್ಚಿಸಿ, ತಾವು ರೈತರ ಪರವಾಗಿದ್ದೇವೆ. ರೈತರ ಹಿತಾಸಕ್ತಿಗೆ ಬದ್ದರಾಗಿದ್ದೇವೆ ಎಂದು ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X