ಜನರ ಸುರಕ್ಷತೆಗಾಗಿ ರಾಜಧಾನಿಯ 30 ಕಡೆಗಳಲ್ಲಿ ‘ಸೇಫ್ಟಿ ಐಲ್ಯಾಂಡ್’ ವ್ಯವಸ್ಥೆ ಜಾರಿ: ಸಚಿವ ಪರಮೇಶ್ವರ್​

Date:

Advertisements

ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಪರಮೇಶ್ವರ್​ ತಿಳಿಸಿದರು.

ವಿಧಾನಪರಿಷತ್​ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, “ಬೆಂಗಳೂರಿನಲ್ಲಿ 7500 ಕ್ಯಾಮೆರಾಗಳು ಇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲರಾಂ ಇರಲಿದೆ. ಇವುಗಳ ಮೇಲೆ 24 ಗಂಟೆ ನಿಗಾ ಇರಲಿದೆ” ಎಂದರು.

“ಸೇಫ್ಟಿ ಐಲ್ಯಾಂಡ್‌ಗಳು ಟಿಲಿಪೋನ್‌ ಬೂತ್‌ ಮಾದರಿಯಲ್ಲಿವೆ. ಅಲ್ಲಿರುವ ಬಟನ್ ಒತ್ತಿದರೆ 7 ನಿಮಿಷದೊಳಗೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ. ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಕೂಡ ಬಳಕೆ ಮಾಡುತ್ತಿದ್ದೇವೆ” ಎಂದು ಹೇಳಿದರು.

Advertisements

ಸೇಫ್ಟಿ ಐಲ್ಯಾಂಡ್‌ಗಳ ಬಳಕೆ ಹೆಚ್ಚುತ್ತಿದೆ. ಮೊನ್ನೆ ಹೊರದೇಶದ ಪ್ರಜೆಯೊಬ್ಬರು ಪರ್ಸ್‌ ಕಳೆದುಕೊಂಡು ಸೇಫ್ಟಿ ಐಲ್ಯಾಂಡ್‌ ಬಳಸಿಕೊಂಡಿದ್ದರು. ಕೂಡಲೇ ಆ ಪರ್ಸ್‌ ಕದ್ದ ಕಳ್ಳ ಪೊಲೀಸರಿಗೆ ಸಿಕ್ಕಿಬಿದ್ದ” ಎಂದು ವಿವರಿಸಿದರು.

ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಹೇಗಿರಲಿದೆ?

ನೀಲಿ ಬಣ್ಣದಲ್ಲಿರುವ ಟೆಲಿಫೋನ್ ಬೂತ್‌ನಂತಹ ರಚನೆ ಹೊಂದಿರುವ ಸೇಫ್ಟಿ ಐಲ್ಯಾಂಡ್​​ ಯಾರಾದರೂ ಸಂಕಷ್ಟದಲ್ಲಿರುವಾಗ ಅಥವಾ ಅವರ ಮೊಬೈಲ್ ಫೋನ್‌ ಸಂಪರ್ಕ ಸಾಧ್ಯವಾಗದಿದ್ದಾಗ ಅವರು ಹತ್ತಿರದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಸಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಪ್ರತಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಸಿಸಿಟಿವಿ ಹೊಂದಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ನೈಜ ಸಮಯದ ಮಾಹಿತಿ ನೀಡುತ್ತದೆ. ಬಳಕೆದಾರರು ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಬಳಿ ಬಂದು ಬಟನ್ ಒತ್ತಬೇಕು. ಇದು ಸಮೀಪದ ನಿಯಂತ್ರಣ ಕೊಠಡಿಗೆ ಸಂಪರ್ಕ ಕಲ್ಪಿಸುವುದರೊಂದಿಗೆ ಕರೆ ಮಾಡಿದ ವ್ಯಕ್ತಿಯ ಪರಿಸ್ಥಿತಿಯನ್ನು ತಿಳಿಸುತ್ತದೆ. ಪೊಲೀಸ್ ಸಿಬ್ಬಂದಿ ಸಾಧ್ಯವಾದಷ್ಟು ಬೇಗ ಸ್ಥಳಕ್ಕೆ ಆಗಮಿಸುತ್ತಾರೆ.

ಬೆಂಗಳೂರಿನಲ್ಲಿ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಗಳಿಗಾಗಿ ನಗರ ಪೊಲೀಸರು ಈಗಾಗಲೇ ತುರ್ತು ಟೋಲ್ ಫ್ರೀ ಸಂಖ್ಯೆ 112 ಅನ್ನು ನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ಐಟಿ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸಾರ್ವಜನಿಕರ ಸುರಕ್ಷತೆಗಾಗಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಹೆಚ್ಚುವರಿ ರಸ್ತೆ ಸಾಧನಗಳಾಗಿವೆ ಎಂದು ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X