ನಾಲ್ಕನೇ ಟೆಸ್ಟ್ | ಚೊಚ್ಚಲ ಪಂದ್ಯದಲ್ಲೇ ಆಕಾಶ್‌ ದೀಪ್‌ಗೆ 3 ವಿಕೆಟ್: ಇಂಗ್ಲೆಂಡ್‌ನ 5 ವಿಕೆಟ್ ಪತನ

Date:

Advertisements

ಭಾರತ – ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡುತ್ತಿರುವ ಆಂಗ್ಲ ಪಡೆ ಭೋಜನ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದೆ. ಚೊಚ್ಚಲ ಪಂದ್ಯದಲ್ಲಿಯೇ ವೇಗಿ ಆಕಾಶ್ ದೀಪ್ ಆಂಗ್ಲ ಪಡೆಯ ಮೊದಲ ಮೂವರು ಬ್ಯಾಟರ್‌ಗಳನ್ನು ಔಟ್ ಮಾಡಿ ನಡುಕ ಹುಟ್ಟಿಸಿದರು.

ಅತಿಥೇಯ ಟಿಂ ಇಂಡಿಯಾ ಬೌಲಿಂಗ್‌ ದಾಳಿಗೆ ಪ್ರವಾಸಿ ಇಂಗ್ಲೆಂಡ್ ತಂಡ ನಲುಗಿದ್ದು, 44 ಓವರ್‌ಗಳಲ್ಲಿ 165 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

Advertisements

ಆಕಾಶ್ ದೀಪ್ ಬೌಲಿಂಗ್ ದಾಳಿಗೆ ಜಾಕ್‌ ಕ್ರಾಲಿ(42), ಬೆನ್‌ ಡೆಕೆಟ್ (11) ಹಾಗೂ ಓಲಿ ಪೋಪ್ (0) ತಮ್ಮ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದರು. ಜಾನಿ ಬೈರ್‌ಸ್ಟೋ (38) ಅವರನ್ನು ಅಶ್ವಿನ್ ಔಟ್‌ ಮಾಡಿದರೆ, ನಾಯಕ ಬೆನ್‌ ಸ್ಟೋಕ್ಸ್‌(3) ಅವರನ್ನು ರವೀಂದ್ರ ಜಡೇಜಾ ಪೆವಿಲಿಯನ್‌ಗೆ ಅಟ್ಟಿದ್ದರು.

ಪಾನೀಯ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ ಜೋರೂಟ್ (47), ವಿಕೆಟ್ ಕೀಪರ್ ಬೆನ್‌ ಫೋಕ್ಸ್‌ (18) ಬ್ಯಾಟಿಂಗ್‌ ಆಡುತ್ತಿದ್ದಾರೆ.

ಟೀಂ ಇಂಡಿಯಾ ಪರ ಆಕಾಶ್ ದೀಪ್ 38/3, ಆರ್‌ ಅಶ್ವಿನ್ 34/1 ಹಾಗೂ ರವೀಂದ್ರ ಜಡೇಜಾ 36/1 ವಿಕೆಟ್ ಕಬಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X