ದಾಳಿಗೆ ಹೆದರಿ ದೇಣಿಗೆ : ಬಿಜೆಪಿ ವಿರುದ್ಧದ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

Date:

Advertisements

ಹಲವು ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿಯನ್ನು ತಪ್ಪಿಸಿಕೊಳ್ಳಲು ಬಿಜೆಪಿಗೆ ದೇಣಿಗೆ ನೀಡಿರುವುದು ಹಾಗೂ ಬಿಜೆಪಿಯಿಂದ ದೇಣಿಗೆ ಪಡೆದಿರುವ ಹಲವು ಸಂಸ್ಥೆಗಳು ಕೇಂದ್ರದಿಂದ ಅನುಕೂಲ ಪಡೆದಿರುವುದರ ವಿರುದ್ಧ ಸಂಪೂರ್ಣ ತನಿಖೆ ನಡೆಸುವಂತೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪತ್ರ ಬರೆದಿದ್ದಾರೆ.

ಇತ್ತೀಚಿಗಷ್ಟೆ ಆನ್‌ಲೈನ್‌ ಮಾಧ್ಯಮಗಳಾದ ದಿ ನ್ಯೂಸ್ ಮಿನಿಟ್ ಹಾಗೂ ನ್ಯೂಸ್ ಲಾಂಡ್ರಿ ಬಿಜೆಪಿಗೆ ದೇಣಿಗೆ ನೀಡಿದ ಸುಮಾರು 30 ಕಂಪನಿಗಳ ಪಟ್ಟಿಯನ್ನು ಹಲವು ದಾಖಲೆಗಳ ಸಮೇತ ತನಿಖಾ ವರದಿ ಪ್ರಕಟಿಸಿದ್ದವು.

ಎರಡೂ ಮಾಧ್ಯಮ ಸಂಸ್ಥೆಗಳು ಕೈಗೊಂಡ ತನಿಖಾ ವರದಿಯಲ್ಲಿ ದೇಶದ ವಿವಿಧ ರಾಜ್ಯಗಳ 30 ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ), ಆದಾಯ ತೆರಿಗೆ ಇಲಾಖೆ(ಐ.ಟಿ) ಹಾಗೂ ಸಿಬಿಐ ಒಳಗೊಂಡ ಇತರ ಸಂಸ್ಥೆಗಳು ದಾಳಿ ನಡೆಸಿವೆ. ದಾಳಿಗೊಳಗಾದ ನಂತರ ಈ ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡಿವೆ ಎಂದು ತಿಳಿಸಲಾಗಿದೆ.

Advertisements

ತನಿಖಾ ವರದಿಯ ಪ್ರಕಾರ ಕನಿಷ್ಠ 30 ಸಂಸ್ಥೆಗಳು 2018 ರಿಂದ 2022-23 ವರೆಗೆ ಬಿಜೆಪಿಗೆ ಸುಮಾರು 335 ಕೋಟಿ ರೂ. ದೇಣಿಗೆ ನೀಡಿವೆ. ಇವುಗಳಲ್ಲಿ 23 ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡದಿದ್ದಾಗ ತನಿಖಾ ಸಂಸ್ಥೆಗಳಿಂದ ದಾಳಿಗೆ ಒಳಗಾಗಿವೆ. ಈ ಕಂಪನಿಗಳಲ್ಲಿ ಹಲವು ತನಿಖಾ ಸಂಸ್ಥೆಗಳ ಕ್ರಮದಿಂದಾಗಿ ಬಿಜೆಪಿಗೆ ದೇಣಿಗೆ ನೀಡುವುದನ್ನು ಹೆಚ್ಚಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

“ಮೇಲಿನ ನಿದರ್ಶನಗಳಂತೆ ತನಿಖಾ ಸಂಸ್ಥೆಗಳ ದಾಳಿಗೆ ಹೆದರಿ ಆಡಳಿತ ಪಕ್ಷಕ್ಕೆ ದೇಣಿಗೆ ನೀಡಿರುವುದು  ಕಾನೂನು ಸುಲಿಗೆಯ ಸ್ಪಷ್ಟವಾದ ಪ್ರಕರಣವಾಗಿದೆ. ಖಂಡಿತವಾಗಿಯೂ ಕೇವಲ ಇಂತಹ ಕಾರ್ಯವಿಧಾನದ ಪ್ರಕರಣಗಳಲ್ಲಿ ಮಾತ್ರ ಸುಲಿಗೆಗಳು ನಡೆದಿಲ್ಲ. ಈ ಪ್ರಕರಣ ದೊಡ್ಡ ಜಾಲದಂತೆ ಕಾಣುತ್ತಿದೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

“ನಾವು ಎಲ್ಲಿಯೂ ಪ್ರಕರಣಗಳನ್ನು ದಾಖಲಿಸಿಲ್ಲ ಎಂದು ಆರೋಪಿಸಿಲ್ಲ ಅಥವಾ ತನಿಖಾ ಸಂಸ್ಥೆಗಳು ಅಕ್ರಮವಾಗಿ ಕ್ರಮ ಕೈಗೊಂಡಿವೆ ಎಂದು ಹೇಳಿಲ್ಲ. ಈ ಸಂಶಯಾತ್ಮಕ ಕಂಪನಿಗಳ ವಿರುದ್ಧ ಏಕೆ ಇ.ಡಿ ಕ್ರಮ ಕೈಗೊಂದೆ ಹಾಗೂ ನಂತರ ಇವುಗಳು ಬಿಜೆಪಿಗೆ ದೇಣಿಗೆ ನೀಡಿರುವುದರಿಂದ ತನಿಖೆಯನ್ನು ಸಮರ್ಥಿಸುತ್ತದೆ.ಇದು ಕಾಕತಾಳಿಯವಾದರೆ ಇ.ಡಿ ಕ್ರಮದ ನಂತರ ಬಿಜೆಪಿಗೆ ಏಕೆ ದೇಣಿಗೆ ನೀಡಿದ್ದಾರೆ” ಎಂದು ವೇಣುಗೋಪಾಲ್ ಪ್ರಶ್ನಿಸಿದ್ದಾರೆ.

“ನೀವು ಯಾವುದನ್ನು ಮುಚ್ಚಿಡಲಿಲ್ಲವೆಂದರೆ, ನೀವು ಪ್ರತಿಯೊಂದು ವರ್ಷ ಬಿಜೆಪಿ ಖಜಾನೆಗೆ ನೀಡಿರುವ ದಾಖಲೆಗಳನ್ನು ಪ್ರಸ್ತುತಪಡಿಸಲು ಇಚ್ಚೀಸುವಿರಾ?ನೀವು ವಾಸ್ತವ ವರದಿಯನ್ನು ಪ್ರಸ್ತುತಪಡಿಸದಿದ್ದರೆ, ಸಂಶಯಾಸ್ಪದ ಸಂಸ್ಥೆಗಳ ಮೂಲಕ ಬಿಜೆಪಿಗೆ ನೀಡಿರುವ ಸುಲಿಗೆ ದೇಣಿಗೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೊಳಪಡಿಸಲು ಸಿದ್ಧರಿದ್ದೀರಾ?” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X