ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

Date:

Advertisements

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ ನಾನಾ ರೀತಿಯಲ್ಲಿ ಮುಂದುವರೆದಿದೆ. ಏಟು-ತಿರುಗೇಟುಗಳ ಮೂಲಕ ಸುದ್ದಿಯಲ್ಲಿರುವ ದರ್ಶನ್, ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ‘ಗೌಡತಿ ಸೇನೆ’ ಎಂಬ ಸಂಘಟನೆಯ ಮುಖಂಡೆಯರು ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ಗುರುವಾರ ದೂರು ನೀಡಿದ್ದರು. ಇದೀಗ, ಶುಕ್ರವಾರ ಮತ್ತೆರಡು ದೂರುಗಳು ದಾಖಲಾಗಿವೆ.

‘ಇವತ್ತು ಒಬ್ಬಳು, ನಾಳೆ ಮತ್ತೊಬ್ಬಳು’ ಎಂಬ ಹೇಳಿಕೆ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ಸಿಲುಕಿರುವ ನಟ ದರ್ಶನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ದೂರು ದಾಖಲಾಗಿದೆ. ಮಾತ್ರವಲ್ಲದೆ, ಆರ್.ಆರ್ ನಗರ ಠಾಣೆಯಲ್ಲಿ ಗಣೇಶ್ ಗೌಡ ಎಂಬವರು ಮತ್ತು ಚಂದ್ರಲೇಔಟ್ ಠಾಣೆಯಲ್ಲಿ ಜಗದೀಶ್ ಎಂಬವವರು ದರ್ಶನ್ ವಿರುದ್ಧ ದೂರು ದಾಖಲಿಸಿದ್ದಾರೆ.

“ಪ್ರಭಾವಿ ಸಮುದಾಯದ ನಾಯಕರು ಮತ್ತು ಹೆಣ್ಣು ಮಕ್ಕಳ ಬಗ್ಗೆ ನಟ ದರ್ಶನ್ ತುಚ್ಛವಾಗಿ ಮಾತನಾಡಿದ್ದಾರೆ. ಹೆಣ್ಣು ಮಕ್ಕಳನ್ನು ಆಟಿಕೆಯ ವಸ್ತುಗಳ ರೀತಿ ಬಳಸಿ ಬಿಸಾಡುವಂತಹ ಅರ್ಥದಲ್ಲಿ ದರ್ಶನ್ ಮಾತನಾಡಿದ್ದಾರೆ. ಅವರ ಮಾತು ಮಹಿಳಾ ಕುಲಕ್ಕೆ ಅಪಮಾನ ಮಾಡಿದೆ. ಅಲ್ಲದೆ, ಒಕ್ಕಲಿಗ ನಾಯಕರ ವಿರುದ್ಧ ಅಪಹಾಸ್ಯ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ದೂರು ಹಿಂಪಡೆದು ಕ್ಷಮೆ ಕೇಳಿದ ದೂರುದಾರ

ನಿರ್ಮಾಪಕ ಉಮಾಪತಿ ಅವರನ್ನು ದರ್ಶನ್ ನಿಂದಿಸಿದ್ದಾರೆ ಎಂದು ಆರೋಪಿಸಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎಂಬವರು ಇದೀಗ ಉಲ್ಟಾ ಹೊಡೆದಿದ್ದಾರೆ. ತಾವು ನೀಡಿರುವ ದೂರನ್ನು ಹಿಂಪಡೆಯುವುದಾಗಿ ಹೇಳಿರುವ ಅವರು ದರ್ಶನ್ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್...

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

Download Eedina App Android / iOS

X