ರಾಯಚೂರು | ಮಾ.3ರಿಂದ 5ರವರೆಗೆ ತೆಲಂಗಾಣದಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ

Date:

Advertisements

ಸಿಪಿಐ(ಎಂಎಲ್) ಮಾಸ್ ಲೈನ್ ಸಮಿತಿಯಿಂದ ಮಾ.3ರಿಂದ 5ರವರೆಗೆ ತೆಲಂಗಾಣ ಖಮ್ಮಂನಲ್ಲಿ ರಾಷ್ಟ್ರೀಯ ಐಕ್ಯತಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಡಿ.ಎಚ್ ಪೂಜಾರ ಹೇಳಿದರು.

ಅವರಿಂದು ರಾಯಚೂರಿನಲ್ಲಿ ಮಾದ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಿಪಿಐ(ಎಂಎಲ್) ಪ್ರಜಾಪಂಥ, ಪಿಸಿಸಿ-ಸಿಪಿಐ(ಎಂಎಲ್), ಸಿಪಿಐ(ಎಂಎಲ್) ಆರ್‌ಯ ಕಮುನಿಷ್ಯ ಸಂಘಟನೆಗಳು ಐಕ್ಯಗೊಳ್ಳಲಿದ್ದು ಕೋಮುವಾದಿ, ಕಾರ್ಪೋರೇಟ್ ಶಕ್ತಿಗಳ ವಿರುದ್ದ ಐಕ್ಯ ಹೋರಾಟಕ್ಕೆ ವೇದಿಕೆ ಸಿದ್ದಗೊಳ್ಳಲಿದೆ ಎಂದರು.

ದೇಶ ಗಂಡಾಂತರಕ್ಕೆ ಸಿಲುಕಿದೆ. ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಅಧಿಕಾರಕ್ಕೆ ಬಂದನಂತರ ಕೋಮುಭಾವನೆಗಳನ್ನು ಕೆರಳಿಸಿ ಜನರನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ. ಬಡತನ, ನಿರುದ್ಯೋಗ, ಬೆಲೆ ಏರಿಕೆ ಕುರಿತು ಜನರು ಗಮನ ನೀಡದಂತೆ ಧರ್ಮ ಧರ್ಮಗಳ, ಜಾತಿಗಳ ಮಧ್ಯೆ ಸಂಘರ್ಷ ನಡೆಯುವಂತೆ ಮಾಡಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲು ಪುಲ್ವಾಮ ದುರ್ಘಟನೆಗಳ ಹೆಸರಿನಲ್ಲಿ ಬಿಜೆಪಿ ಅಧಿಕಾರ ಹಿಡಿದರೆ, ಈಬಾರಿ ರಾಮ ಹೆಸರಿನಲ್ಲಿ ಅಧಿಕಾರ ಹಿಡಿಯುವ ಹುನ್ನಾರ ಪ್ರಾರಂಭಿಸಿದೆ. ಅಯೋಧ್ಯಯ ಶ್ರೀರಾಮ ಮಂದಿರ ನಿರ್ಮಾಣದಿಂದ ದೇಶದ ಜನರ ಸಮಸ್ಯೆಗಳು ಪರಿಹಾರವಾಗುತ್ತಿವೆ ಎಂದು ಬಿಂಬಿಸಲಾಗುತ್ತಿದೆ ಎಂದರು.

Advertisements

2014ರಲ್ಲಿ 53ಲಕ್ಷ ಕೋಟಿ ದೇಶದ ಸಾಲವಿತ್ತು. ಈಗ ಒಂದು ಲಕ್ಷ 95 ಸಾವಿರ ಲಕ್ಷ ಕೋಟಿ ಸಾಲ ಮಾಡಲಾಗಿದೆ. ರೈತರ ಸಾಲ ಮನ್ನಾ ಮಾಡಲು ಆರ್ಥಿಕ ಹೊರೆ ಎಂದು ಹೇಳುವವರು ಆದಾನಿಯವರ 15 ಲಕ್ಷ ಕೋಟಿ ಆದಾಯ ಪಡೆದಿದ್ದಾರೆ. ಕಾರ್ಪೋರೇಟ್ ಕಂಪನಿಗಳ 10ಲಕ್ಷ ಕೋಟಿ ಸಾಲಮನ್ನಾ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೆ 11 ಲಕ್ಷ ಕೋಟಿ ಬಡ್ಡಿ ಪಾವತಿಸಿದೆ. ಸರ್ಕಾರ ಸಾಲದಿದ್ದರೂ ಆದಾನಿ, ಅಂಬಾನಿಗಳ ಆದಾಯ ಕುಸಿದಿಲ್ಲ. ಜಿಎಸ್‌ಟಿ ಸೇರಿದಂತೆ ಅನೇಕ ರೀತಿ ಕರಗಳನ್ನು ಜನರ ಮೇಲೆ ಹಾಕಿ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರವೂ ಸಹ ಅಬಕಾರಿ ಆದಾಯ ಮೇಲೆ ಅವಲಂಬಿತವಾಗಿ ಜನರಿಗೆ ಕುಡಿಯುಲು ಹೇಳುತ್ತಿದೆ ಎಂದು ಕಿಡಿಯಾದರು.

ಹನುಮ ಧ್ವಜ, ಕುವೆಂಪು ಘೋಷ ವಾಕ್ಯ ಬದಲಾವಣೆ, ನಾಡಗೀತೆ ಕುರಿತು ಚರ್ಚಿಸುವ ಶಾಸಕರು ಜನರಿಗೆ ಕೆಲಸ, ಕುಡಿಯುವ ನೀರು, ಆರೋಗ್ಯ ಕುರಿತು ಚರ್ಚೆ ಮಾಡುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ, ರೈತ, ಕಾರ್ಮಿಕ ನೀತಿ ವಿರೋಧಿಸಿ ಕಮುನಿಷ್ಯ ಪಕ್ಷಗಳು ಒಂದೇ ವೇದಿಕೆ ಮೂಲಕ ಬಲಿಷ್ಠ ಹೋರಾಟಕ್ಕೆ ಸಿದ್ದವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ರಮೇಶ ಪಾಟೀಲ್, ಬಸವರಾಜ ಯರದಿಹಾಳ, ಅಶೋಕ ನಿಲೋಗಲ್, ಸುರೇಶ, ಸ್ವಾಮಿದಾಸ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X