ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

Date:

Advertisements

“ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾದ ಬೆನ್ನಲ್ಲೇ, ಕೇಂದ್ರ ಸರ್ಕಾರ ಸಿಬಿಐ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಂಚು ರೂಪಿಸಿದೆ” ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸುಮಾರು ಎರಡು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಂಚು ರೂಪಿಸುತ್ತಲೇ ಇದೆ. ಆಮ್ ಆದ್ಮಿ ಪಾರ್ಟಿ ಮುಖಂಡರ ಮನೆಗಳ ಮೇಲೆ ನೂರಾರು ಬಾರಿ ಸಿಬಿಐ ಮತ್ತು ಇಡಿ ದಾಳಿ ಮಾಡಿಸಲಾಗಿದೆ. ಆದರೆ, ಒಂದು ರೂಪಾಯಿ ಕೂಡ ಅಕ್ರಮ ಹಣ ಸಿಕ್ಕಿಲ್ಲ” ಎಂದರು.

“ಸಿಬಿಐ ಕರೆದಾಗಲೆಲ್ಲಾ ಅರವಿಂದ್ ಕೇಜ್ರಿವಾಲ್ ಉತ್ತರ ನೀಡಿದ್ದಾರೆ. ಜಾರಿ ನಿರ್ದೇಶನಾಲಯದಿಂದ ಎರಡು ತಿಂಗಳಲ್ಲಿ 7 ಸಮನ್ಸ್ ನೀಡಲಾಗಿದೆ. ಕೇಜ್ರಿವಾಲ್‌ ಎಲ್ಲ ಸಮನ್ಸ್‌ಗಳಿಗೂ ಉತ್ತರಿಸಿದ್ದಾರೆ. ಈ ಸಮನ್ಸ್‌ಗಳು ಬಿಜೆಪಿ ಕಚೇರಿಯಿಂದ ತಯಾರಾಗುತ್ತಿವೆ. ಇಡಿ ಕೋರ್ಟ್ ಮೆಟ್ಟಿಲೇರಿದ್ದು, ಮಾರ್ಚ್‌ 16ರಂದು ನಡೆಯುವ ವಿಚಾರಣೆವರೆಗೂ ಕೇಜ್ರಿವಾಲ್ ಬಂಧನ ಸಾಧ್ಯವಿಲ್ಲ. ಈ ವಿಚಾರ ತಿಳಿದ ನಂತರ, ಸಿಬಿಐ ಅನ್ನು ದಾಳವಾಗಿ ಬಳಸಿಕೊಂಡು ಬಂಧಿಸುವ ಷಡ್ಯಂತ್ರ ರೂಪಿಸಲಾಗಿದೆ” ಎಂದರು.

Advertisements

“ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವುದಿಲ್ಲ, ನಾವು ಸುಲಭವಾಗಿ 400 ಸೀಟು ಗೆಲ್ಲಬಹುದು ಎಂದು ಪ್ರಧಾನಿ ಮೋದಿ ಭ್ರಮೆಯಲ್ಲಿದ್ದರು. ಆದರೆ, ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಮಾತುಕತೆ ಕೊನೆಯ ಹಂತ ತಲುಪಿದ್ದು, ದೇಶದ 6 ರಾಜ್ಯಗಳಲ್ಲಿ ಕಾಂಗ್ರೆಸ್-ಎಎಪಿ ಜೊತೆಯಾಗಿರುವುದು ಬಿಜೆಪಿ ನಿದ್ದೆಗೆಡಿಸಿದೆ. ಇಂಡಿಯಾ ಒಕ್ಕೂಟದಿಂದ ಹೊರಬಂದರೆ ಎಲ್ಲ ಕೇಸುಗಳನ್ನು ರದ್ದು ಮಾಡುವ ಜೊತೆ, ಬಂಧಿಸಿರುವ ಎಎಪಿ ನಾಯಕರನ್ನು ಬಿಡುಗಡೆ ಮಾಡುವುದಾಗಿ ಬಿಜೆಪಿ ಹೇಳುತ್ತಿದೆ” ಎಂದು ತಿಳಿಸಿದರು.

“ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಲು ಇಂಡಿಯಾ ಒಕ್ಕೂಟ ರಚನೆಯಾಗಿದ್ದು, ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸುವುದು ಖಚಿತ. ಬಿಜೆಪಿ ಸಾಮ್ರಾಜ್ಯ ಪತನವಾಗುವ ಸಮಯ ಹತ್ತಿರ ಬಂದಿದೆ. ಇಂಡಿಯಾ ಒಕ್ಕೂಟದ ಗೆಲುವನ್ನು ಸಹಿಸದೆ ಬಿಜೆಪಿ ವಿಪಕ್ಷದ ನಾಯಕರನ್ನು ಹತ್ತಿಕ್ಕಲು ನೋಡುತ್ತಿದೆ. ಬಿಜೆಪಿ ಸರ್ವಾಧಿಕಾರಿ ಮಾದರಿ ಆಡಳಿತ ನಡೆಸುತ್ತಿದ್ದು, ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದರು.

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

“ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಎನ್ನುವುದು ಚಂಡೀಗಢ ಮೇಯರ್ ಚುನಾವಣೆಯಲ್ಲಿ ಸಾಬೀತಾಗಿದೆ. ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಚುನಾವಣಾ ಫಲಿತಾಂಶ ಪ್ರಕಟಿಸಿದೆ. ಎಎಪಿಯ ಕುಲದೀಪ್ ಮೇಯರ್ ಆಗಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಹೊರಟಿರುವ ಬಿಜೆಪಿ ವಿರುದ್ಧ ಫೆಬ್ರುವರಿ 24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದರು.

ಆಮ್ ಆದ್ಮಿ ಪಾರ್ಟಿಯ ರಾಜ್ಯ ಖಜಾಂಚಿ ಪ್ರಕಾಶ್ ಮಾತನಾಡಿ, “ಇಂಡಿಯಾ ಒಕ್ಕೂಟವನ್ನು ಮುಗಿಸಲು ಕೇಂದ್ರ ಸರ್ಕಾರ ಸಿಬಿಐ, ಇಡಿ ಸಂಸ್ಥೆಗಳನ್ನು ಬಳಸುತ್ತಿದೆ. ಬಿಜೆಪಿ ಬೆದರಿಕೆಗೆ ನಾವು ಇಂಡಿಯಾ ಒಕ್ಕೂಟ ತೊರೆಯುವುದಿಲ್ಲ. ಹಲವು ಎಕ್ಸ್‌ ಖಾತೆಗಳನ್ನು ಬ್ಲಾಕ್ ಮಾಡುತ್ತಿದ್ದು, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಇದನ್ನೆಲ್ಲಾ ವಿರೋಧಿಸಿ ಶನಿವಾರ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಹಮ್ಮಿಕೊಂಡಿದೆ” ಎಂದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, “ಆಪರೇಷನ್ ಕಮಲ ಎನ್ನುವ ಅನೈತಿಕ ಮಾರ್ಗದಿಂದ ಬಿಜೆಪಿ ಅನೇಕ ರಾಜ್ಯಗಳಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ. ಇಡಿ, ಸಿಬಿಐ ಬಳಸಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸಿದ್ದಾರೆ. ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದರೆ ಅದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಬೇಕಾಗುತ್ತದೆ. ರೈತರನ್ನು ದೆಹಲಿಯೊಳಗೆ ಬಿಡದೆ ಅವಮಾನ ಮಾಡಿದ್ದೀರಾ, ಬಿಜೆಪಿಗೆ ಅಂತ್ಯಕಾಲ ಸಮೀಪವಾಗಿದ್ದು, ಜನರೇ ಬುದ್ದಿ ಕಲಿಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ಮಾಧ್ಯಮಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿಮಠ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X