ರಾಹುಲ್ ನ್ಯಾಯಯಾತ್ರೆಗೆ ಪಾಲ್ಗೊಳ್ಳಿ ಎಂದ ಕಮಲ್‌ ನಾಥ್ : ಬಿಜೆಪಿ ಸೇರ್ಪಡೆಯ ವದಂತಿಗೆ ತೆರೆ

Date:

Advertisements

ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್‌ ನಾಥ್ ರಾಜ್ಯದ ಜನರನ್ನು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರನ್ನು ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ. ಇದರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,  ಭಾರತ್ ಜೋಡೋ ನ್ಯಾಯ ಯಾತ್ರೆಯೊಂದಿಗೆ ಆಗಮಿಸುತ್ತಿರುವ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಲು ಮಧ್ಯ ಪ್ರದೇಶದ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹರ್ಷಿತರಾಗಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರು ದೇಶದ ಬೀದಿಗಳ ಮೂಲಕ ಬಿಜೆಪಿಯ ಅನ್ಯಾಯ, ದಬ್ಬಾಳಿಕೆ ಹಾಗೂ ದೌರ್ಜನ್ಯದ ವಿರುದ್ಧ ಹೋರಾಡಲು ನಮ್ಮನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಮಧ್ಯ ಪ್ರದೇಶದ ಜನರು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರು ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಹುಲ್‌ ಅವರಿಗೆ ಶಕ್ತಿ ಹಾಗೂ ಉತ್ಸಾಹ ನೀಡಬೇಕು. ಅನ್ಯಾಯವನ್ನು ಕೊನೆಗೊಳಿಸಲು ನಾವೆಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳೋಣ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

Advertisements

ಈ ಮೂಲಕ ಕಮಲ್‌ನಾಥ್ ಅವರು ಬಿಜೆಪಿಗೆ ಸೇರುವ ಎಲ್ಲ ವದಂತಿಗಳಿಗೂ ತೆರೆ ಎಳೆದಿದ್ದಾರೆ.

ಈ ನಡುವೆ ಕಮಲ್‌ನಾಥ್ ಅವರ ಪ್ರಾಬಲ್ಯದ ಮಧ್ಯಪ್ರದೇಶದ ಚಿನ್‌ದ್ವಾರ ಜಿಲ್ಲೆಯ ಹಲವು ಕಾಂಗ್ರೆಸ್ ನಾಯಕರು ಬುಧವಾರ(ಫೆ.21) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚಿನ್‌ದ್ವಾರ ಜಿಲ್ಲೆಯ ಸುಮಾರು 1500 ಸ್ಥಳೀಯ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದವರಲ್ಲಿ ಜಿಲ್ಲಾ ಕಾರ್ಯದರ್ಶಿಗಳು, ಪಾಲಿಕೆ ಸದಸ್ಯರು, ಸರಪಂಚರು, ಜನಪದ ಸದಸ್ಯರು ಮುಂತಾದವರು ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X