ತುಮಕೂರು | ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

Advertisements

ತುಮಕೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಚೇರಿ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಶನಿವಾರ ಬೆಳಿಗ್ಗೆ 11ಕ್ಕೆ ಲೋಕಾಯುಕ್ತ ಎಸ್‌ಪಿ ವಲಿಬಾಷ ನೇತೃತ್ವದಲ್ಲಿ ಬೆಂಗಳೂರು ಮತ್ತು ತುಮಕೂರಿನ ಸುಮಾರು 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇಡೀ ಕಚೇರಿಯನ್ನು ತಮ್ಮ ಹಿಡಿತಕ್ಕೆ ಪಡೆದು ವಿವಿಧ ಶಾಖೆಗಳಲ್ಲಿ ಅಗತ್ಯ ದಾಖಲಾತಿಗಳ ಪರಿಶೀಲನೆ ನಡೆಸಿದರು.

6 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆಯ ಕಂದಾಯ ಶಾಖೆ, ಎಂಜಿನಿಯರ್ ಶಾಖೆ, ಆರೋಗ್ಯ ಶಾಖೆ, ಯುಜಿಡಿ ಸೇರಿದಂತೆ ಹಲವು ಶಾಖೆಗಳಿಗೆ ತೆರಳಿ ಅಗತ್ಯ ಕಡತಗಳು, ದಾಖಲಾತಿಗಳ ತಪಾಸಣೆ ನಡೆಸಿದರು.

Advertisements

ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪಾಲಿಕೆಯ ಹಲವು ಶಾಖೆಗಳನ್ನು ಜಾಲಾಡಿದರು.

ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದಾಗ ಕಚೇರಿಯ ಆವರಣದಲ್ಲಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ಅವರ ಕೆಲಸ ಕಾರ್ಯಗಳ ಬಗ್ಗೆ ವಿಚಾರಣೆ ನಡೆಸಿದರು.

ಮಹಾನಗರ ಪಾಲಿಕೆಯ ಹೊಸ ಆಡಳಿತ ಕಚೇರಿ ಸೇರಿದಂತೆ ಇಡೀ ಮಹಾನಗರ ಪಾಲಿಕೆಯ ಕಚೇರಿ ಆವರಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ಸಂಪೂರ್ಣ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ತಮ್ಮ ಕೆಲ ಕಾರ್ಯಗಳಿಗಾಗಿ ಪಾಲಿಕೆ ಕಚೇರಿಗೆ ಬಂದಿದ್ದ ಸಾರ್ವಜನಿಕರು ಹೊರ ಬರಲಾಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರಾಜ್ಯಾದ್ಯಂತ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಅವಕಾಶ ನೀಡಬೇಕು: ಕರವೇ ರಾಜ್ಯಾಧ್ಯಕ್ಷ

ಮಹಾನಗರ ಪಾಲಿಕೆಯ ಎಲ್ಲ ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ದಾಳಿಯಲ್ಲಿ ಲೋಕಾಯುಕ್ತ ಎಸ್‌ಪಿ ವಲಿಭಾಷ, ಡಿವೈಎಸ್‌ಪಿ ಉಮಾಶಂಕರ್, ಇನ್ಸ್‌ಪೆಕ್ಟರ್ ರಾಮಕೃಷ್ಣ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X