ಗದಗ | ಭೂ ನ್ಯಾಯಮಂಡಳಿಗೆ ಇಬ್ಬರು ಸದಸ್ಯರ ನೇಮಕ

Date:

Advertisements

ಹಿಂದಿನಿಂದಲೂ ಅನ್ಯಾಯದ ವಿರುದ್ಧ ಮತ್ತು ಬಡವರ, ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಕೂಡ ನನ್ನ ಹೋರಾಟ ಅದೇ ರೀತಿಯಲ್ಲಿ ಮುಂದುವರೆತ್ತದೆ. ನಾವೆಲ್ಲರೂ ಸಂವಿಧಾನದಡಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡೋಣ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ ನಂದೆಣ್ಣವರ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಭೂ ನ್ಯಾಯಮಂಡಳಿಯ ಸದಸ್ಯರಾಗಿ ನೇಮಕವಾದ ಬಳಿಕ ಮಾತನಾಡಿದರು.

ಇನ್ನೋರ್ವ ಭೂ ನ್ಯಾಯಮಂಡಳಿಯ ಸದಸ್ಯರಾಗಿರುವ ನಜೀರ್ ಅಹ್ಮದ್ ಗದಗ ಮಾತನಾಡಿ, “ಸಂವಿಧಾನವೇ ನಮಗೆ ರಕ್ಷಣಾ ಕವಚ ಇದ್ದಂತೆ. ಹಾಗಾಗಿ ನಾವು ಸಂವಿಧಾನದ ಅಡಿಯಲ್ಲಿ ಸಾಮಾಜಿಕ ಕೆಲಸ ಮಾಡುವುದರ ಜತೆಗೆ ಸಂವಿಧಾನವನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ” ಎಂದು ಹೇಳಿದರು.

Advertisements

“ಲಕ್ಷೇಶ್ವರದಲ್ಲಿ ಮುಸ್ಲಿಂ ಸಮುದಾಯ ಮತ್ತು ದಲಿತ ಸಮುದಾಯಗಳು ಸಹೋದರರ ಸಂಬಂಧವನ್ನು ಹೊಂದಿದ್ದು, ಅದು ಯಾವಾಗಲೂ ಹೀಗೆ ಮುಂದುವರೆಯಲಿ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ, ಹಿರಿಯ ಹೋರಾಟಗಾರ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸುರೇಶ ನಂದೆಣ್ಣವರ ಮತ್ತು ಇನ್ನೋರ್ವ ಭೂ ನ್ಯಾಯ ಮಂಡಳಿಯ ಸದಸ್ಯ, ಕಾಂಗ್ರೆಸ್ ಪಕ್ಷದ ನಾಯಕ, ವಕೀಲರೂ ಆಗಿರುವ ನಜೀರ್ ಅಹ್ಮದ್ ಗದಗ ಅವರಿಗೆ ಲಕ್ಷ್ಮೇಶ್ವರ ಪ್ರವಾಸಿ ಮಂದಿರದಲ್ಲಿ ವಕೀಲ ಮೈಲಾರಪ್ಪ ಡಿ ಎಚ್ ಅವರ ಸಮ್ಮುಖದಲ್ಲಿ ಸನ್ಮಾನಿಸಿ ಶುಭ ಹಾರೈಸಿ ಸಿಹಿ ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ವಾಧಿಕಾರಿ ಧೋರಣೆ ಅಂತ್ಯಗೊಳಿಸಲು ಮತದಾರರು ಮುಂದಾಗಬೇಕು: ಎಸ್ ಆರ್ ಹೀರೆಮಠ

ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಸದಾನಂದ ಸಂದೆಣ್ಣವರ, ಯುವ ನಾಯಕ ಅನಿಲ ನಂದೆಣ್ಣವರ, ಮಾರುತಿ ಗೋವನಕೊಪ್ಪ, ಮುತ್ತು ಸೂರಣಗಿ, ಬಸವರಾಜ ಸೂರಣಗಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X