ಸಂದೇಶ್‌ಖಾಲಿ ಪ್ರಕರಣ | ಟಿಎಂಸಿ ವಿರುದ್ಧ ಮತ ಚಲಾಯಿಸಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ; ಎನ್‌ಸಿಎಸ್‌ಟಿ ವಿವರ

Date:

Advertisements

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರು ಬಡ ಬುಡಕಟ್ಟು ಕುಟುಂಬಗಳಿಂದ ಮನರೇಗಾ ವೇತನವನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಟಿಎಂಸಿ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಅವರನ್ನು ಹಿಂಸಿಸುತ್ತಾರೆ ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (ಎನ್‌ಸಿಎಸ್‌ಟಿ) ಹೇಳಿದೆ.

ಸಂದೇಶ್‌ಖಾಲಿಗೆ ಎನ್‌ಸಿಎಸ್‌ಟಿ ಉಪಾಧ್ಯಕ್ಷ ಅನಂತ ನಾಯಕ್ ನೇತೃತ್ವದ ಮೂವರು ಸದಸ್ಯರ ತಂಡ ಭೇಟಿ ನೀಡಿದ್ದು, ಬುಡಕಟ್ಟು ಸಮುದಾಯದ ಜನರ ಅಳಲನ್ನು ಆಲಿಸಿದೆ. ಆರೋಪಗಳ ಬಗ್ಗೆ ತನಿಖೆ ನಡೆಸಿದೆ. ಈ ವೇಳೆ, “ಪಶ್ಚಿಮ ಬಂಗಾಳ ಪೊಲೀಸರು ಷಹಜಹಾನ್ ಮತ್ತು ಅವರ ಸಹಚರರನ್ನು ‘ರಕ್ಷಿಸಿದ್ದಾರೆ'” ಎಂದು ದೂರುದಾರರು ತಿಳಿಸಿದ್ದಾರೆ.

ತನಿಖಾ ತಂಡ ದೆಹಲಿಗೆ ಮರಳಿದೆ. ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ದತೆ ನಡೆಸುತ್ತಿದೆ. ತಂಡ ನೇತೃತ್ವ ವಹಿಸಿದ್ದ ನಾಯಕ್ ಅವರು, “ಷಹಜಹಾನ್ ಮತ್ತು ಅವರ ಸಹಚರರಿಂದ ಬುಡಕಟ್ಟು ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಭೂಕಬಳಿಕೆಗೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ದೂರುಗಳನ್ನು ಸಮಿತಿಯು ಸ್ವೀಕರಿಸಿದೆ” ಎಂದು ತಿಳಿಸಿದ್ದಾರೆ.

Advertisements

ಪಶ್ಚಿಮ ಬಂಗಾಳದ ಸುಂದರ್‌ಬನ್ಸ್‌ನ ಗಡಿಯಲ್ಲಿರುವ ಉತ್ತರ 24 ಪರಗಣ ಜಿಲ್ಲೆಯ ನದಿಯ ಸಂದೇಶ್‌ಖಾಲಿ ಪ್ರದೇಶವು ಉದ್ವಿಗ್ನಗೊಂಡಿದೆ. ಒಂದು ತಿಂಗಳಿನಿಂದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಷಹಜಹಾನ್ ವಿರುದ್ಧ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಷಹಜಹಾನ್ ಮತ್ತು ಅವರ ಸಹಚರರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

“ಬಡ ಬುಡಕಟ್ಟು ಜನರಿಗೆ ತಮ್ಮ ಮನರೇಗಾ ದುಡಿಮೆಯನ್ನು ನೀಡುವಂತೆ ಷಹಜಹಾನ್ ಒತ್ತಡ ಹಾಕುತ್ತಾರೆ. ಸಾಲದಾತರಿಂದ ಹಣ ಪಡೆದು ತನಗೆ ನೀಡುವಂತೆ ಕೇಳುತ್ತಾರೆ. ಇದೆಲ್ಲದರಿಂದ ಅಲ್ಲಿನ ಜನರು ಈಗಾಗಲೇ ದಣಿದಿದ್ದರೆ. ದೇಶಾದ್ಯಂತ ಇಂತಹ ಪರಿಸ್ಥಿತಿಯನ್ನು ಎಲ್ಲಿಯೂ ಖಂಡಿಲ್ಲ” ಎಂದು ನಾಯಕ್ ಹೇಳಿದ್ದಾರೆ.

“ಷಹಜಹಾನ್ ಮತ್ತು ಅವರ ಸಹಚರರು ಚುನಾವಣೆಯಲ್ಲಿ ಇತರ ಪಕ್ಷಗಳಿಗೆ ಮತ ಹಾಕಿದ ಜನರನ್ನು ಹಿಂಸಿಸಿದ್ದಾರೆ. ಅಲ್ಲದೆ, ಸ್ಥಳೀಯ ಮಹಿಳೆಯರನ್ನು ತಡರಾತ್ರಿ ಸಭೆಗಳಿಗೆ ಬರುವಂತೆ ಹೇಳುತ್ತಿದ್ದರು. ಅವರು ಹೇಳಿದಂತೆ ಕೇಳದಿದ್ದರೆ, ಅಂತಹವರ ಕುಟುಂಬದ ಸದಸ್ಯರನ್ನು ಹಿಂಸಿಸುತ್ತಿದ್ದರು ಎಂಬುದು ಸಮಿತಿ ಗಮನಕ್ಕೆ ಬಂದಿದೆ” ಎಂದು ಅವರು ವಿವರಿಸಿದ್ದಾರೆ.

“ಸಂತ್ರಸ್ತ ಮಹಿಳೆ ಪೊಲೀಸರನ್ನು ಸಂಪರ್ಕಿಸಿದರೆ, ಅವರು ಎಫ್‌ಐಆರ್ ಅಥವಾ ದೂರನ್ನು ದಾಖಲಿಸುವುದಿಲ್ಲ. ಬದಲಿಗೆ, ಷಹಜಹಾನ್‌ ಜೊತೆ ಮಾತುಕತೆ ನಡೆಸುವಂತೆ ದೂರುದಾರರಿಗೆ ಹೇಳುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯ ಬೆಂಬಲಕ್ಕೆ ನಿಂತಿದ್ದಾರೆ” ಎಂದು ನಾಯಕ್ ತಿಳಿಸಿದ್ದಾರೆ.

“ಆರೋಪಿಗಳು ಬುಡಕಟ್ಟು ಕುಟುಂಬಗಳನ್ನು ತಮ್ಮ ಭೂಮಿಯನ್ನು ಹಸ್ತಾಂತರಿಸುವಂತೆ ಕೇಳುತ್ತಾರೆ. ಜನರು ಪ್ರತಿಭಟಿಸಿದರೆ ಅವರ ಹೊಲಗಳಿಗೆ ಉಪ್ಪುನೀರನ್ನು ಬಿಡುತ್ತಾರೆ ಎಂಬ ದೂರುಗಳೂ ಬಂದಿವೆ” ಎಂದು ಹೇಳಿದ್ದಾರೆ.

“10 ಕಿಲೋಮೀಟರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದ ಜನರ ಭೂಮಿಯನ್ನು ಶಹಜಹಾನ್ ಕಿತ್ತುಕೊಂಡಿದ್ದಾರೆ” ಎಂದು ನಾಯಕ್ ತಿಳಿಸಿದ್ದಾರೆ.

ಫೆಬ್ರವರಿ 20 ರಂದು, ಆಯೋಗವು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ. ಈ ವಿಷಯದ ಬಗ್ಗೆ ವಾಸ್ತವಿಕ ಮತ್ತು ಕ್ರಮ ತೆಗೆದುಕೊಂಡ ವರದಿಗಳನ್ನು ಮೂರು ದಿನಗಳಲ್ಲಿ ಸಲ್ಲಿಸುವಂತೆ ಕೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X